ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದರೆ ಸರ್ಕಾರವೇ ಹೊಣೆ ಹೊರಬೇಕು: ಕಾಂಗ್ರೆಸ್
Team Udayavani, Jun 26, 2020, 1:51 PM IST
ಬೆಂಗಳೂರು: ನಗರದಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದಿರುವ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಪ್ರಯತ್ನ ನಡೆಸುವುದಾಗಿ ಹೇಳಿದ್ದು, ಇದರಿಂದ ಸಮಾಧಾನಗೊಳ್ಳದ ಪ್ರತಿಪಕ್ಷ ಕಾಂಗ್ರೆಸ್ ಮುಂದೆ ಪರಿಸ್ಥಿತಿ ಕೈ ಮೀರಿದರೆ ಸರ್ಕಾರವೇ ಹೊಣೆ ಹೊರಬೇಕು ಎಂದು ಹೇಳಿದೆ.
ಮುಖ್ಯಮಂತ್ರಿಗಳು ನಗರದ ಸಚಿವರು, ಶಾಸಕರೊಂದಿಗೆ ನಡೆಸಿದ ಸಭೆ ಬಳಿಕ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕರಾದ ರಾಮಲಿಂಗಾರೆಡ್ಡಿ, ಎನ್.ಎ. ಹ್ಯಾರಿಸ್ ಅವರು, ಲಾಕ್ ಡೌನ್ ಮಾಡುವಂತೆ ಸಲಹೆ ನೀಡಲಾಗಿದೆ. ಸೋಂಕು ಸಮುದಾಯಕ್ಕೆ ಹರಡಲು ಆರಂಭವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನಿವಾರ್ಯ. ಸರ್ಕಾರದ ಬಳಿ ಸರಿಯಾದ ಮಾಹಿತಿ ಕ್ರಿಯಾ ಯೋಜನೆ ಕೂಡ ಇದ್ದಂತಿಲ್ಲ ಎಂದರು.
10,000 ಬೆಡ್ ಕಾಯ್ದಿರಿಸಿರುವುದಾಗಿ ಸರ್ಕಾರ ಹೇಳಿದೆ. ಹಾಗಾದರೆ ಸೋಂಕು ವ್ಯಾಪಕವಾಗಿ ಹರಡುವುದು ಖಚಿತವಾಗಿದ್ದು ಹಾಗಿದ್ದರೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದೆ. ಮುಂದೆ ನಿಯಂತ್ರಣಕ್ಕೆ ಕ್ರಮ ಏನು ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆ ಇಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಸರ್ಕಾರ ಇದನ್ನು ಇನ್ನಷ್ಟು ಗಂಭಿರವಾಗಿ ಪರಿಣಿಸಬೇಕು. ಮುಖ್ಯಮಂತ್ರಿಗಳಿಗೆ ಕಾಳಜಿ ಇದೆ. ಆದರೆ ಇತರರಿಂದ ಸಹಕಾರ ಸಿಕ್ಕಿದಂತೆ ಕಾಣುತ್ತಿಲ್ಲ ಎಂದು ಎನ್.ಎ. ಹ್ಯಾರಿಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ