ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದರೆ ಸಾಬೀತುಪಡಿಸಲಿ:ಸಚಿವ ರೇವಣ್ಣ
Team Udayavani, Jun 16, 2018, 6:00 AM IST
ಹಾಸನ: ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತಿತರ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡಿರುವುದನ್ನು ಸಾಬೀತುಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದರು. ವಿವಿಧ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಥವಾ ರಾಜ್ಯದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಮ್ಮನ್ನು ಕರೆಸಿ ಕೇಳಿದ್ದರೆ ತಾನೇ ಸ್ಪಷ್ಟನೆ ನೀಡುತ್ತಿದ್ದೆ ಎಂದು ಹೇಳಿದರು.
ವರ್ಗಾವಣೆ ಸಹಿತ ಇತರ ವಿಷಯಗಳ ಕುರಿತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕೇಳಿದ್ದರೂ ಸ್ಪಷ್ಟೀಕರಿಸುತ್ತಿದ್ದೆ. ಈ ವಿಷಯವನ್ನು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವ ಅಗತ್ಯವೇ ಇರಲಿಲ್ಲ ಎಂದರು. ತನಗೂ ಸ್ವಾಭಿಮಾನವಿದೆ. ಉಹಾಪೋಹದ ಸುದ್ದಿ ಆಧರಿಸಿ ತಮ್ಮನ್ನು ಬ್ಲಾಕ್ವೆುಲ್ ಮಾಡುವ ತಂತ್ರಗಳಿಗೆ ತಾನು ಬಗ್ಗುವುದಿಲ್ಲ. ನಾನು ವಿಪಕ್ಷದಲ್ಲಿದ್ದು, ಕೆಲಸ ಮಾಡಿರುವವನು ಎಂದ ಅವರು, ತನ್ನ ವಿರುದ್ಧ ಅಪಪ್ರಚಾರ ಮಾಡುವವರು ಈ ಸಂಗತಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಹೆಸರು ತರಬೇಕು. ಆ ಮೂಲಕ ಅಭದ್ರಗೊಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ. ಇಂಥ ಪಿತೂರಿಗಳಿಗೆಲ್ಲ ಜಗ್ಗುವುದಿಲ್ಲ ಎಂದರು.
ರಸ್ತೆಗಳ ಹಾನಿ ಪರಿಶೀಲನೆಗೆ ರಾಜ್ಯಾದಂತ ಪ್ರವಾಸ
ಅತಿವೃಷ್ಟಿಯಿಂದ ರಸ್ತೆಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು, ರವಿವಾರ ಹುಬ್ಬಳ್ಳಿಗೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯುವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಎಂಜಿನಿಯರು ಗಳಿಗೆ ಸೂಚನೆ ನೀಡಿದ್ದೇನೆ. ಶನಿವಾರದಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸುವೆ. ದಕ್ಷಿಣ ಕನ್ನಡ, ಉಡುಪಿ. ಉತ್ತರ ಕನ್ನಡ ಮತ್ತಿತರ ಜಿಲ್ಲೆಗಳಿಗೂ ಭೇಟಿ ನೀಡುವೆ. ಶಿರಾಡಿ ಮತ್ತು ಚಾರ್ಮಾಡಿ ರಸ್ತೆಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ