ನಿಮ್ಮ ದಾರಿ ನಿಮಗೆ ಎಂದ ಸುಧಾಕರ್
Team Udayavani, Jul 14, 2019, 3:03 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ.ಕೆ.ಸುಧಾಕರ್, ಅತೃಪ್ತ ಶಾಸಕರ ತಂಡ ಸೇರಲು ಮುಂಬೈಗೆ ತೆರಳಿದ್ದಾರೆ. ಎಂಟಿಬಿ ನಾಗರಾಜ್ ಜತೆ ಡಾ.ಕೆ.ಸುಧಾಕರ್ ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಶನಿವಾರ ತೀವ್ರ ಪ್ರಯತ್ನ ಪಟ್ಟರಾದರೂ ಸುಧಾಕರ್ ಯಾರಿಗೂ ಸಿಗಲಿಲ್ಲ.
“ವಿಧಾನಸೌಧದಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ. ಪಕ್ಷದಲ್ಲಿ ಇದ್ದಾಗ ಸಾಕಷ್ಟು ನೋವು ಆನುಭವಿಸಿದ್ದೇನೆ. ಹೀಗಾಗಿ, ನನ್ನ ದಾರಿ ನನಗೆ, ನಿಮ್ಮ ದಾರಿ ನಿಮಗೆ’ ಎಂದು ಡಾ.ಕೆ.ಸುಧಾಕರ್ ಹೇಳಿ ಹೋಗಿದ್ದಾರೆಂದು ತಿಳಿದು ಬಂದಿದೆ.
ಎಂಟಿಬಿ ನಾಗರಾಜ್ ಜತೆ ಮುಂಬೈಗೆ ತೆರಳಲು ಮೊದಲೇ ನಿರ್ಧಾರವಾಗಿತ್ತು. ಆದರೆ, ಎಂಟಿಬಿ ನಾಗರಾಜ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಸಿದ್ದರಾಮಯ್ಯ ಮನೆಗೆ ಕರೆದೊಯ್ದು ಮನವೊಲಿಸುವ ಪ್ರಯತ್ನ ನಡೆಸಿದ್ದರು. ಎಂಟಿಬಿ ನಾಗರಾಜ್ಗಾಗಿ ಕಾಯುತ್ತಿದ್ದ ಡಾ.ಕೆ.ಸುಧಾಕರ್, ಕೊನೆಗೆ ರಾತ್ರಿ 7 ಗಂಟೆಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ಮುಂಬೈಗೆ ತೆರಳಿದರು.
ಹೀಗಾಗಿ, ಸುಧಾಕರ್ ಮನವೊಲಿಸಲು ಎಂಟಿಬಿ ನಾಗರಾಜ್ ಜತೆ ಹೋಗಿದ್ದ ಸಚಿವ ಜಮೀರ್ ಅಹಮದ್, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಬರಿಗೈಲಿ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಿಂದ ತಮ್ಮ ಮನವೊಲಿಕೆಗೆ ಬರುತ್ತಿರುವ ವಿಚಾರ ತಿಳಿದ ಸುಧಾಕರ್, ಯಾರ ಕೈಗೂ ಸಿಗದೆ ಮುಂಬೈಗೆ ತೆರಳಿದ್ದಾರೆ.
ಹೀಗಾಗಿ, ಎಂಟಿಬಿ ನಾಗರಾಜ್ ಅವರು ಮತ್ತೆ ಸಿದ್ದರಾಮಯ್ಯ ನಿವಾಸಕ್ಕೆ ವಾಪಸ್ಸಾಗಿ ಡಾ.ಸುಧಾಕರ್ ಕೈಗೆ ಸಿಗದ ಬಗ್ಗೆ ಮಾಹಿತಿ ನೀಡಿದರು. ಆಗ, ಸಿದ್ದರಾಮಯ್ಯ ನಿವಾಸದಿಂದಲೇ ಅವರ ಮೊಬೈಲ್ಗೆ ಕರ ಮಾಡಿದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ