ನಾನು 420 ಅಲ್ಲ,108 ಶ್ರೀರಾಮುಲು;ಸಿದ್ದರಾಮಯ್ಯನಷ್ಟು ಬುದ್ದಿವಂತ ಅಲ್ಲ
Team Udayavani, Nov 1, 2018, 5:14 PM IST
ಬಳ್ಳಾರಿ: ಲೋಕಸಭಾ ಉಪಚುನಾವಣಾ ರಂಗೇರಿದ್ದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರು ನನಗೆ ಕನ್ನಡ ಬರುವುದಿಲ್ಲ ಅನ್ನುತ್ತಾರೆ. ನಾನು ಮಾತನಾಡುವುದು ಗ್ರಾಮೀಣ ಸೊಗಡಿನ ಕನ್ನಡ ,ನಾನು ಸಿದ್ದರಾಮಯ್ಯ ಅವರಷ್ಟು ಬುದ್ಧಿವಂತನಲ್ಲ,ದಡ್ಡ ಅನ್ನುವುದನ್ನು ಒಪ್ಪಿಕೊಳ್ಳುತ್ತೇನೆ ಅಂದರು.
ನನ್ನನ್ನು ಸಿದ್ದರಾಮಯ್ಯ ಅವರು ಏನೆಲ್ಲಾ ಕರೆದರು 420 ಅಂದರು, ಆದರೆ ಈ ರಾಜ್ಯದ ಜನ ನನ್ನನ್ನು 108 ಶ್ರೀರಾಮುಲು ಅಂತ ಕರೆಯುತ್ತಾರೆ. ಬಡವರಿಗಾಗಿ ವಿಶೇಷ ಅಂಬುಲೆನ್ಸ್ ವ್ಯವಸ್ಥೆ ನಾನು ಮಾಡಿಸಿದ್ದನ್ನು ಮನವರಿಕೆ ಮಾಡುತ್ತೇನೆ ಎಂದರು.
ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದರು, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದರು ಎಂದು ಕಿಡಿ ಕಾರಿದರು.
ಬಡಾಯಿ ಕೊಚ್ಚಿಕೊಳ್ಳುವ ಈ ಸರ್ಕಾರ 500 ಕೋಟಿ ರೂಪಾಯಿ ಅನುದಾನವನ್ನು ಬಳ್ಳಾರಿ ಜಿಲ್ಲೆಗೆ ಕಡಿತ ಮಾಡಿ ಅವಮಾನ ಮಾಡಿದೆ ಎಂದು ಗಂಭೀರ ಆರೋಪ ಮಾಡಿದರು.