ನನಗೆ ಅಸಮಾಧಾನವಿಲ್ಲ: ಎಸ್.ಎನ್. ನಾರಾಯಣಸ್ವಾಮಿ
Team Udayavani, Jul 9, 2019, 3:00 AM IST
ಬೆಂಗಳೂರು: “ನನಗೆ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಯವರು ನನ್ನನ್ನು ಸಂಪರ್ಕ ಮಾಡಿಲ್ಲ’ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿ, ನಾನು ಬಿಜೆಪಿಗೆ ಹೋಗುತ್ತೇನೆ ಎಂಬುದು ಸುಳ್ಳು.
ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಬಂದಿದ್ದೇನೆ ಎಂದರು. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರನ್ನು ನಾವು ಸೋಲಿಸಿಲ್ಲ. ಕೆಲ ವಿಚಾರಗಳಲ್ಲಿ ಅವರು ನಡೆದುಕೊಂಡ ರೀತಿಯಿಂದ ಸೋಲು ಅನುಭವಿಸಬೇಕಾಯಿತು ಎಂದು ಹೇಳಿದರು.