KKRTC; ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿ


Team Udayavani, Dec 21, 2023, 1:39 PM IST

Implementation of no-premium insurance scheme for Kalyan Karnataka transport staff

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೊಳಿಸಲಾಗಿದೆ.

ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸದರಿ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ.

ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ್ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿರುತ್ತದೆ. ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.

ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಎಸ್. ಭರತ್ ಡಾ. ಕೆ. ನಂದಿನಿ ದೇವಿ ಭಾಆಸೇ, ನಿರ್ದೇಶಕರು (ಸಿ&ಜಾ), ಕೆಎಸ್ ಆರ್ ಟಿ ಸಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರವಾಗಿ ವೆಂಕಟ್ ಸುದೀರ ಚೀದೆಲ್ಲ, ಪ್ರಾದೇಶಿಕ ಮುಖ್ಯಸ್ಥರು ಕಲಬುರಗಿ ಹಾಗೂ ಶ್ರೀ ನಾಗಭೂಷಣ. ಜಿ.ಆರ್. ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಿ.ಆರ್.ಸಿ. ಬೆಂಗಳೂರು, ಶ್ರೀ,ನಾಗರಾಜ್ ದೇಶನೂರು, ಮುಖ್ಯ ವ್ಯವಸ್ಥಾಪಕರು ಸಿ.ಆರ್.ಸಿ. ಬೆಂಗಳೂರು ಹಾಜರಿದ್ದರು.

ಟಾಪ್ ನ್ಯೂಸ್

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.