ಬಜೆಟ್‌ನ ಕಾರ್ಯಕ್ರಮಗಳನ್ನು ಅನುಷ್ಠಾನಿಸಿ: ಸಚಿವ ಸುನಿಲ್‌  


Team Udayavani, Aug 19, 2021, 6:35 AM IST

ಬಜೆಟ್‌ನ ಕಾರ್ಯಕ್ರಮಗಳನ್ನು ಅನುಷ್ಠಾನಿಸಿ: ಸಚಿವ ಸುನಿಲ್‌  

ಬೆಂಗಳೂರು: ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್‌ ಸಂಪರ್ಕ ನೀಡುವುದನ್ನೂ ಒಳಗೊಂಡಂತೆ ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಇಂಧನ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್‌ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂಧನ ಇಲಾಖೆ, ವಿದ್ಯುತ್‌ ಸರಬರಾಜು ಕಂಪೆನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ  ಪರಿಶೀಲನ ಸಭೆ ನಡೆಸಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರಕಾರದ ಸಹಯೋಗದ ಯೋಜನೆಗಳನ್ನು  ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೆ ರಾಜಿ ಯಾಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ, ಬದಲಾವಣೆ ಕುರಿತಂತೆ ಬಹಳಷ್ಟು ದೂರುಗಳು ಬರುತ್ತವೆ. ಅವುಗಳ ಬಗ್ಗೆ ತತ್‌ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗಂಗಾಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ನೀಡುವ ಕೆಲಸವೂ ಸಹ ಕಾಲಮಿತಿಯೊಳಗೆ ಮತ್ತು ಪರಿಣಾಮಕಾರಿ ಆಗಬೇಕು. ಅನಧಿಕೃತ ಸಂಪರ್ಕ, ವಿದ್ಯುತ್‌ ಸೋರಿಕೆ, ವಿದ್ಯುತ್‌ ಸಂಪರ್ಕ ನೀಡುವಲ್ಲಿ ವಿಳಂಬ, ಮೀಟರ್‌ಗಳ ಅಳವಡಿಕೆಯಲ್ಲಿ ಆಗುವ ವಿಳಂಬ ಇತ್ಯಾದಿ ಕಾರಣಗಳಿಂದ ಇಂಧನ ಸರಬರಾಜು ಕಂಪೆನಿಗಳಿಗಾಗುವ ನಷ್ಟ ತಡೆಯಲು ಕಾರ್ಯಯೋಜನೆ ರೂಪಿಸಬೇಕು. ಅದನ್ನು ಅನುಷ್ಠಾನಗೊಳಿಸಲು ಎಲ್ಲ ವಿಧವಾದ ಕ್ರಮಗಳನ್ನು ಕೈಗೊಳ್ಳಬೇಕು. ಕೃಷಿ ಮತ್ತು ಕೈಗಾರಿಕೆಗಳಿಗೆ ಮತ್ತು ಎಲ್ಲ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್‌ ಸರಬರಾಜು ನಮ್ಮ ಆದ್ಯತೆಯಾಗಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಚಾರ್ಜಿಂಗ್‌ ಕೇಂದ್ರಕ್ಕೆ ಆದ್ಯತೆ :

ವಿದ್ಯುತ್‌ ಚಾಲಿತ ವಾಹನಗಳು ಹೆಚ್ಚಾಗಿ ಬರುತ್ತಿರುವುದರಿಂದ ವಿದ್ಯುತ್‌ ವಾಹನ ಚಾರ್ಜಿಂಗ್‌ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಈಗಾಗಲೇ ಗುರುತಿಸಿರುವ ಸ್ಥಳಗಳಲ್ಲಿ ವಿದ್ಯುತ್‌ ರೀಚಾರ್ಜಿಂಗ್‌ ಮಾಡುವ ಕಾರ್ಯಕ್ಕೆ ವೇಗ ನೀಡಬೇಕು. ಗ್ರಾಹಕ ಸಂಬಂಧಿ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್‌ ಸಂಪರ್ಕ ನೀಡಿಕೆ ಸಹಿತ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್‌ಟ್ರ್ಯಾಕ್‌ ಸೆಲ್‌ ಅನ್ನು ಕೂಡಲೇ ಆರಂಭಿಸಬೇಕು ಎಂದರು.

ಪ್ರಶಸ್ತಿ ಪ್ರದಾನ :

ಕೆಜಿಎಫ್‌ ಉಪವಿಭಾಗಕ್ಕೆ ಜುಲೈ ತಿಂಗಳ ಅತ್ಯುತ್ತಮ ಕಾರ್ಯ  ನಿರ್ವಹಣೆಗೆ ಅಲ್ಲಿನ ಸಹಾಯಕ ಎಂಜಿನಿಯರ್‌ ಹೇಮಲತಾ ಅವರಿಗೆ ಪ್ರಶಸ್ತಿ ಫಲಕ ಮತ್ತು 10 ಸಾವಿರ ನಗದು ಬಹುಮಾನ ನೀಡಲಾಯಿತು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.