24 ಗಂಟೆಗಳಲ್ಲಿ 5 ಕೋಟಿ ರೂ.ಗೂ ಅಧಿಕ ಚುನಾವಣ ಅಕ್ರಮ ಜಪ್ತಿ
Team Udayavani, Mar 19, 2024, 10:52 PM IST
ಬೆಂಗಳೂರು: ನೀತಿ ಸಂಹಿತೆ ಜಾರಿ ತಂಡಗಳಿಂದ ಚುನಾವಣ ಅಕ್ರಮಗಳ ಬೇಟೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ನಗದು, ಮದ್ಯ, ಮಾದಕ ವಸ್ತುಗಳು, ಉಚಿತ ಉಡುಗೊರೆಗಳು ಸೇರಿ 5 ಕೋಟಿ ರೂ.ಗೂ ಅಧಿಕ ಚುನಾವಣ ಅಕ್ರಮ ಜಪ್ತಿ ಮಾಡಲಾಗಿದೆ. ಈವರೆಗಿನ ಒಟ್ಟು ಚುನಾವಣ ಅಕ್ರಮ 20.62 ಕೋಟಿ ರೂ. ಆಗಿದೆ.
ಕಳೆದ 24 ಗಂಟೆಗಳಲ್ಲಿ ಚುನಾವಣ ನೀತಿ ಸಂಹಿತೆ ಜಾರಿ ತಂಡಗಳು, ಆದಾಯ ತೆರಿಗೆ ಅಧಿಕಾರಿಗಳು, ಅಬಕಾರಿ ತಂಡಗಳು ಸೇರಿ 1.42 ಕೋಟಿ ನಗದು, 5.45 ಲಕ್ಷ ರೂ. ಮೌಲ್ಯದ ಉಚಿತ ಉಡುಗೊರೆಗಳು, 3.17 ಕೋಟಿ ರೂ ಮೊತ್ತದ 2.37 ಲಕ್ಷ ಲೀಟರ್ ಮದ್ಯ, 5.06 ಲಕ್ಷ ಮೌಲ್ಯದ 3.5 ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ನೀತಿ ಸಂಹಿತೆ ಜಾರಿ ತಂಡಗಳು ಹಾಗೂ ಪೊಲೀಸರು 135 ಎಫ್ಐಆರ್ಗಳನ್ನು ದಾಖಲಿಸಿಕೊಂಡಿದ್ದು ಅಬಕಾರಿ ಇಲಾಖೆಯು 142 ಗಂಭೀರ ಸ್ವರೂಪದ, 126 ಪರವಾನಗಿ ನಿಯಮ ಉಲ್ಲಂಘಿಸಿದ, 7 ಎನ್ಡಿಪಿಎಸ್, ಕರ್ನಾಟಕ ಅಬಕಾರಿ ಕಾಯ್ದೆ-1965ರ ಸೆಕ್ಷನ್ 15ರಡಿ 531 ಕೇಸ್ಗಳನ್ನು ದಾಖಲಿಸಿಕೊಳ್ಳಲಾಗಿದ್ದು, ವಿವಿಧ ಬಗೆಯ 89 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಚುನಾವಣ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಈವರೆಗೆ 1.87 ಕೋಟಿ ನಗದು, 5.45 ಲಕ್ಷ ಮೌಲ್ಯದ ಉಚಿತ ಉಡುಗೊರೆಗಳು, 18.58 ಕೋಟಿ ಮೌಲ್ಯದ 5.94 ಲಕ್ಷ ಲೀಟರ್ ಮದ್ಯ, 10.73 ಲಕ್ಷ ಮೌಲ್ಯದ 10 ಕೆಜಿ ಮಾದಕ ವಸ್ತುಗಳು ಸೇರಿ ಒಟ್ಟಾರೆ 20.62 ಕೋಟಿಯಷ್ಟು ಚುನಾವಣಾ ಅಕ್ರಮ ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಾಣಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ