ಐದೇ ವರ್ಷದಲ್ಲಿ ರಾಜ್ಯದಲ್ಲಿ ಡಬಲ್ ಪ್ರಮಾಣದಲ್ಲಿ ಚುನಾವಣಾ ಅಕ್ರಮ ಪತ್ತೆ
2019ರಲ್ಲಿ ನಾಮಪತ್ರ ಸಲ್ಲಿಕೆ ಆರಂಭಕ್ಕೆ 26.54 ಕೋಟಿ ರೂ. ಅಕ್ರಮ
Team Udayavani, Mar 28, 2024, 6:15 AM IST
ಬೆಂಗಳೂರು: ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಡಬಲ್ ಪ್ರಮಾಣದಲ್ಲಿ ಚುನಾವಣಾ ಅಕ್ರಮ ಪತ್ತೆಯಾಗಿದೆ.
2019ರ ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ನಾಮಪತ್ರ ಸಲ್ಲಿಕೆಯ ಆರಂಭದವರೆಗೆ 26.54 ಕೋಟಿ ರೂ. ಚುನಾವಣಾ ಅಕ್ರಮ ಪತ್ತೆಯಾಗಿದ್ದರೆ ಈ ಸಲ ಇದೇ ಅವಧಿಯಲ್ಲಿ 55.76 ಕೋಟಿ ರೂ. ಮೌಲ್ಯದ ಚುನಾವಣಾ ಅಕ್ರಮ ಪತ್ತೆಯಾಗಿದೆ. ಈ ಹಿಂದಿನ ಲೋಕಸಭಾ ಚುನಾವಣೆಗಿಂತ ಶೇ.110ರಷ್ಟು ಹೆಚ್ಚು ಅಕ್ರಮ ವರದಿ ಆದಂತಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆ ಭಾರೀ ಬಿರುಸಿನ ಪೈಪೋಟಿಯಿಂದ ಕೂಡಿರಲಿದೆ ಎಂದು ರಾಜಕೀಯ ಪಂಡಿತರು ಈಗಾಗಲೇ ಭವಿಷ್ಯ ನುಡಿದಿದ್ದು ಪತ್ತೆಯಾಗುತ್ತಿರುವ ಅಕ್ರಮದ ಪ್ರಮಾಣ ಈ ಹೇಳಿಕೆಯನ್ನು ಪುಷ್ಟಿಕರಿಸುವಂತಿದೆ.
ಈ ಹಿಂದಿನ ಚುನಾವಣೆಗೆ ಹೋಲಿಸಿದರೆ ಭಾರೀ ಪ್ರಮಾಣದಲ್ಲಿ ಚಿನ್ನ ಜಪ್ತಿ ಮಾಡಲಾಗಿದೆ. ಉಚಿತ ಕೊಡುಗೆಗಳು, ನಗದಿನ ಜಪ್ತಿ ಪ್ರಮಾಣವು ಹೆಚ್ಚಿದೆ.
ಕಳೆದ 24 ಗಂಟೆಯಲ್ಲಿ 7.20 ಕೋಟಿ ರೂ. ಅಕ್ರಮ ಪತ್ತೆ:
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸುವ ತಂಡಗಳು 7.20 ಕೋಟಿ ರೂ. ಮೌಲ್ಯದ ಚುನಾವಣಾ ಅಕ್ರಮವನ್ನು ಪತ್ತೆ ಹಚ್ಚಿವೆ.
1.30 ಕೋಟಿ ರೂ ನಗದು, 19.44 ಲಕ್ಷ ಉಚಿತ ಉಡುಗೊರೆಗಳು, 1.27 ಕೋಟಿ ರೂ ಮೌಲ್ಯದ 53,265 ಲೀಟರ್ ಮದ್ಯ, 4.96 ಲಕ್ಷ ರೂ ಮೌಲ್ಯದ 15.22 ಕೆಜಿ ಮಾದಕ ವಸ್ತು, 4.19 ಕೋಟಿ ರೂ ಮೌಲ್ಯದ 7.66 ಕೆಜಿ ಚಿನ್ನ, 2.47 ಲಕ್ಷ ಮೌಲ್ಯದ 1.87 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಈವರೆಗೆ ಒಟ್ಟು 847 ಎಫ್ಐಆರ್ ದಾಖಲಿಸಲಾಗಿದೆ. 92,664 ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಲಾಗಿದೆ. ಅಬಕಾರಿ ಇಲಾಖೆ 848 ಗಂಭೀರ ಪ್ರಕರಣಗಳನ್ನು ದಾಖಲಿಸಿದೆ.
4.21 ಕೋಟಿ ರೂ. ಚಿನ್ನಾಭರಣ ವಶಕ್ಕೆ:
ಹಾಸನದ ಶ್ರವಣಬೆಳಗೊಳದ ಚೆಕ್ಪೋಸ್ಟ್ನಲ್ಲಿ 56.89 ಲಕ್ಷ ರೂ ನಗದು, ಚಿತ್ರದುರ್ಗದ ಪಿಳ್ಳೆಕೆರನಹಳ್ಳಿ ಚೆಕ್ಪೋಸ್ಟ್ನಲ್ಲಿ 20.35 ಲಕ್ಷ ರೂ ನಗದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ತರೀಕೆರೆಯ ಎಂಸಿ ಹಳ್ಳಿ ಚೆಕ್ ಪೋಸ್ಟ್ನಲ್ಲಿ 4.21 ಕೋಟಿ ರೂ ಮೌಲ್ಯದ ಚಿನ್ನ, ಬೆಳ್ಳಿ, ವಜ್ರವನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ