ಕೊಪ್ಪಳದಲ್ಲೂ ಮೂರೇ ತಿಂಗಳಲ್ಲಿ 35 ಶಿಶು ಮರಣ


Team Udayavani, Aug 24, 2017, 8:20 AM IST

baby.jpg

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲೂ ಕಳೆದ ಮೂರು ತಿಂಗಳಲ್ಲಿ 35 ಶಿಶುಗಳು ನಾನಾ ಕಾರಣದಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಜೂನ್‌-ಆಗಸ್ಟ್‌ ಅವಧಿಯಲ್ಲಿ ಜಿಲ್ಲಾಸ್ಪತ್ರೆಗೆ 1136 ಗರ್ಭಿಣಿಯರು ದಾಖಲಾಗಿದ್ದರು. ಈ ಪೈಕಿ ಜೂನ್‌ನಲ್ಲಿ 13, ಜುಲೈನಲ್ಲಿ 12 ಹಾಗೂ ಆಗಸ್ಟ್‌ನಲ್ಲಿ ಈ ತನಕ 10 ಶಿಶುಗಳು ಸಾವನ್ನಪ್ಪಿವೆ. ಈ ಶಿಶುಗಳಲ್ಲಿ 17
ಗಂಡು ಹಾಗೂ 18 ಹೆಣ್ಣು ಎನ್ನಲಾಗಿದೆ.

ಜನಿಸುವಾಗಲೇ ತೂಕ ಕಡಿಮೆ ಹಾಗೂ ಉಸಿರಾಟದ , koppalaತೊಂದರೆಯಿಂದಲೇ ಬಹುಪಾಲು ಮಕ್ಕಳು ಸಾವನ್ನಪ್ಪುತ್ತಿವೆ. ಈ
ಹಿನ್ನೆಲೆಯಲ್ಲಿ ಪಾಲಕರಲ್ಲೂ ಆರೋಗ್ಯ ರಕ್ಷಣೆ ವಿಚಾರದಲ್ಲಿ ಹೆಚ್ಚಿನ ಕಾಳಜಿ ಬೇಕಿದೆ ಎನ್ನುತ್ತಾರೆ ತಜ್ಞ ವೈದ್ಯರು.
ಗರ್ಭಿಣಿಯರು ಒಂಬತ್ತು ತಿಂಗಳ ಅವ ಧಿಯಲ್ಲಿ ಸರಿಯಾಗಿ ಊಟ ಮಾಡದೇ ಇರುವುದು; ಹೊಲಗಳಲ್ಲಿ ನಿರಂತರ ಕೆಲಸ ಹಾಗೂ ಬಾಲ್ಯ ವಿವಾಹವೂ ಶಿಶುಗಳಲ್ಲಿ ಅಪೌಷ್ಟಿಕತೆ ಕೊರತೆಗೆ ಕಾರಣವಾಗಿ ಸಾವನ್ನಪ್ಪುತ್ತಿವೆ. ಇನ್ನು ಕನಿಷ್ಠ 3-5 ವರ್ಷಗಳ ಅಂತರ ಕಾಯ್ದುಕೊಳ್ಳದೆ ತಿಳಿವಳಿಕೆ ಕೊರತೆ ಕಾರಣ ಮಗು ಜನಿಸಿದ ವರ್ಷದಲ್ಲೇ ಮತ್ತೆ ಗರ್ಭ ಧರಿಸುವುದು ಕೂಡ ಶಿಶುಗಳ ಸಾವಿಗೆ ಕಾರಣ ಎಂದು ಹೇಳುತ್ತಾರೆ.

ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ, ಸಕ್ಸೆನಾ ಭೇಟಿ
ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಿನ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ
ಆಧರಿಸಿ ನಿಜ ಸ್ಥಿತಿ ಅರಿಯಲು ಬುಧವಾರ ಎಸ್‌ಎನ್‌ಆರ್‌ ಆಸ್ಪತ್ರೆಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ
ಆಳ್ವ, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೆನಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂಜೆಯ
ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಕುಮಾರ್‌, ಮಹಿಳಾ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ತಡೆ ತಜ್ಞರ
ಸಮಿತಿಯ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ಮತ್ತವರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇದೇ ವೇಳೆ, ಆಸ್ಪತ್ರೆಯ ಜಿಲ್ಲಾ ಶಸOಉ ಚಿಕಿತ್ಸಕ ಡಾ.ಎಚ್‌. ಆರ್‌.ಶಿವಕುಮಾರ್‌ ಮಾತನಾಡಿ, 2017ರ ಜನವರಿಯಿಂದ
ಆಗಸ್ಟ್‌ 22 ರವರೆಗೆ ಎಂಟು ತಿಂಗಳ ಅವಧಿಯಲ್ಲಿ 90 ಮಕ್ಕಳು ವಿವಿಧ ಕಾರಣಗಳಿಗಾಗಿ ಸಾವನ್ನಪ್ಪಿದ್ದಾರೆ. ಆದರೆ, ಇದಾವುವೂ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಕೊರತೆ, ಚಿಕಿತ್ಸೆಯಲ್ಲಿನ ಲೋಪ ಅಥವಾ ಔಷಧೋಪಚಾರ ಕೊರತೆಯಿಂದ ಸಂಭವಿಸಿದ ಸಾವುಗಳಲ್ಲ ಎಂದು ಸ್ಪಷ್ಟಪಡಿಸಿದರು. ಈ ನಡುವೆ ಬಿಜೆಪಿ ಸತ್ಯಶೋಧನಾ ತಂಡ ಗುರುವಾರ ಕೋಲಾರದ ಎಸ್ಸೆನ್ನಾರ್‌ ಆಸ್ಪತ್ರೆಗೆ ಭೇಟಿ ನೀಡಲಿದೆ.

ಮೈಸೂರಲ್ಲಿ 3 ತಿಂಗಳಲ್ಲಿ 93 ಶಿಶುಗಳ ಸಾವು:
2017ರ ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ಅವಧಿಯಲ್ಲಿ ಮೈಸೂರು ಜಿಲ್ಲೆಯ ಆಸ್ಪತ್ರೆಗಳಲ್ಲಿ 9005 ಹೆರಿಗೆ ಆಗಿದ್ದು, ಈ ಪೈಕಿ ಆರು ಮಂದಿ ತಾಯಂದಿರು ಸಾವನ್ನಪ್ಪಿದ್ದಾರೆ. 93 ಶಿಶುಗಳು ಮೃತಪಟ್ಟಿವೆ. ಈ ಪೈಕಿ ಕೆಲ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡು ಬರುತ್ತಿದೆ ಎಂದು ಜಿಲ್ಲಾಧಿಕಾರಿ ರಂದೀಪ್‌ ಡಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.