ನರೇಗಾಕ್ಕೆ ಅಸಮರ್ಪಕ ಅನುದಾನ; ಪ್ರಗತಿಗೆ ಹಿನ್ನಡೆ
Team Udayavani, Feb 13, 2019, 1:31 AM IST
ವಿಧಾನಪರಿಷತ್: “ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಪ್ರಗತಿಯಲ್ಲಿ ರಾಜ್ಯಕ್ಕೆ ಹಿನ್ನಡೆ ಆಗುತ್ತಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಅನುದಾನ ನೀಡದಿರುವುದೇ ಕಾರಣ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ನೀಡಿದ ಹೇಳಿಕೆಯು ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳವಾರ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್. ಪ್ರಸನ್ನ ಕುಮಾರ್, ನರೇಗಾ ಯೋಜನೆ ಅಡಿ ಜಾಬ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉದ್ಯೋಗ ನೀಡಲಾಗುತ್ತಿಲ್ಲ. ಜಾಬ್ ಕಾರ್ಡ್ ಹೊಂದಿರುವ ಗ್ರಾಪಂ ಸದಸ್ಯರಿಗೂ ಶಿವಮೊಗ್ಗದಲ್ಲಿ ಉದ್ಯೋಗ ನೀಡುವುದನ್ನು ಸರ್ಕಾರ ನಿಲ್ಲಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಈ ವರ್ಷ 8.5 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಇದೆ. ಇದಕ್ಕಾಗಿ 3,739 ಕೋಟಿ ರೂ. ಅನುದಾನಕ್ಕೆ ಕೇಂದ್ರದ ಅನುಮೋದನೆ ದೊರಕಿದೆ. ಆದರೆ, ಕೇಂದ್ರದಿಂದ ಹಣ ಪಾವತಿ ಆಗುತ್ತಿಲ್ಲ. ಇದರಿಂದ ರಾಜ್ಯಕ್ಕೆ ಹಿನ್ನಡೆಯಾಗುತ್ತಿದೆ’ ಎಂದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷದ ಸದಸ್ಯರು, “ನಿಮ್ಮ ಎಲ್ಲ ತಪ್ಪುಗಳಿಗೂ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ. ಸರ್ಕಾರಕ್ಕೆ ಮನವರಿಕೆ ಮಾಡುವಲ್ಲಿ ಎಡವಿದ್ದೀರಿ’ ಎಂದರು.
ಆಗ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಕೇವಲ ರಾಜ್ಯದಲ್ಲಿ ಅಲ್ಲ; ದೇಶಾದ್ಯಂತ 12,713 ಕೋಟಿ ರೂ.ಗಳನ್ನು ಕೇಂದ್ರ ಬಾಕಿ ಉಳಿಸಿಕೊಂಡಿದ್ದು, ಇದರಲ್ಲಿ ಕರ್ನಾಟಕಕ್ಕೆ 2,049 ಕೋಟಿ ರೂ. ಬಿಡುಗಡೆ ಆಗಬೇಕಾಗಿದೆ. 2014ರ ಡಿಸೆಂಬರ್ನಿಂದ ಪಾವತಿ ಆಗಿಲ್ಲ. ಅಷ್ಟಕ್ಕೂ ಇದು ನೇರವಾಗಿ ಕೂಲಿಕಾರರ ಖಾತೆಗೆ ಜಮೆ ಆಗುತ್ತದೆ. ಅಪ್ಲೋಡ್ ಮಾಡುವವರು ಆಯಾ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಅಧಿಕಾರಿಗಳು. ಹೀಗಿರುವಾಗ, “ಕನ್ವಿನ್ಸ್’ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿರುಗೇಟು ನೀಡಿದರು.
ಮಧ್ಯಪ್ರವೇಶಿಸಿದ ಸಚಿವ ಡಿ.ಕೆ. ಶಿವಕುಮಾರ್, ಕೂಲಿ ಮಾಡಿದವರಿಗೆ ಕೂಲಿ ಕೊಡಲಿಕ್ಕಾಗದೆ ಯಾವ ರೀತಿ ಸರ್ಕಾರ ನಡೆಸುತ್ತಿರಾ? ದುಡಿಸಿಕೊಂಡು ಕೂಲಿ ಕೊಡಲಿಕ್ಕಾಗಲ್ವೇನ್ರಿ? ಎಂದು ಕಾಲೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?