ರಾಜ್ಯಸಭೆ ಚುನಾವಣೆ ಮುಗಿದರೂ ನಿಲ್ಲದ ಆರೋಪ-ಪ್ರತ್ಯಾರೋಪ
Team Udayavani, Jun 12, 2022, 6:25 AM IST
ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿದರೂ ಆರೋಪ- ಪ್ರತ್ಯಾರೋಪ ಮುಗಿದಿಲ್ಲ.ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಶನಿವಾರವೂ ವಾಗ್ವಾದ ಮುಂದುವರಿದಿದೆ.
ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯ ಅವರ ಒಳ ಒಪ್ಪಂದ ಕಾರಣ ಎಂದು ಸಿ.ಎಂ.ಇಬ್ರಾಹಿಂ ಆರೋಪಿಸಿದ್ದು, ಬಿಜೆಪಿ ಗೆಲ್ಲಲು ಕುಮಾರಸ್ವಾಮಿಯೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋ ಪಿಸಿದ್ದಾರೆ. ಬಿಜೆಪಿಯೂ ಸಿದ್ದರಾಮಯ್ಯ ಅವರನ್ನು “ಅಡ್ಡ ಮತ ದಾನ ರೂವಾರಿ’ ಎಂದು ಕಾಲೆಳೆದಿದೆ.
ಸೋಲು ನಿರೀಕ್ಷಿತ
ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಗೆಲ್ಲಬಾರದಿತ್ತು ಎಂಬ ಕಾಳಜಿ ಇದ್ದರೆ ಎಚ್.ಡಿ. ಕುಮಾರಸ್ವಾಮಿ ಯಾಕೆ ಕಾಂಗ್ರೆಸ್ನ ಮುಸ್ಲಿಂ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಾವು ಸೋಲುತ್ತೇವೆ ಎಂದು ಗೊತ್ತಿತ್ತು. ನಮ್ಮ ಮತ ನಮಗೆ ಹಾಕಿ ಕೊಂಡಿದ್ದೇವೆ. ಜೆಡಿಎಸ್ ಸಹವಾಸ ಮಾಡಿಯೇ ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಕೆಟ್ಟೆವು. ಹೀಗಾಗಿ ಪಕ್ಷದ ಹಿತಾಸಕ್ತಿಯಿಂದ ನಾವು ತೀರ್ಮಾನ ಮಾಡಿದ್ದೆವು. ಜೆಡಿಎಸ್ ಯಾರ ಜತೆ ಯಾವಾಗ ಒಳ ಒಪ್ಪಂದ ಮಾಡಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಎರಡನೇ ಅಭ್ಯರ್ಥಿ ಹಾಕಿದ್ದನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು, ನಮ್ಮ ಪಕ್ಷ ಸ್ವಾಭಿಮಾನದಿಂದ ತೆಗೆದು ಕೊಂಡ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ನಾವು ಯಾಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆವು ಎಂಬುದಕ್ಕೆ ನಮ್ಮ ಕಾರ್ಯಕರ್ತರೇ ಉತ್ತರಿಸುತ್ತಾರೆ. ಇಲ್ಲಿ ಲಾಭ-ನಷ್ಟ ವಿಚಾರ ಬೇರೆ. ನಮಗೆ ಕಳೆದ ಬಾರಿಯ ಘಟನೆ ಮರುಕಳಿಸುವ ಇಚ್ಛೆ ಇರಲಿಲ್ಲ. ಬೇರೆ ಪಕ್ಷದ ಶಾಸಕರು ಮತ ಹಾಕಲು ಸಿದ್ಧರಿದ್ದರೂ ನಾವು ಒಪ್ಪಲಿಲ್ಲ, ಆತ್ಮಸಾಕ್ಷಿ ಮತ ಕೇಳಿ ಸುಮ್ಮನಾದೆವು ಎಂದು ಹೇಳಿದ್ದಾರೆ.
ಕೋಮುವಾದಿಗಳನ್ನು ಸೋಲಿಸ ಬೇಕು ಎಂದು ರಾಷ್ಟ್ರಮಟ್ಟದಲ್ಲಿ ಮಾತನಾಡುವ ಪಕ್ಷ ಬಿಜೆಪಿ ಗೆಲ್ಲಿಸಲು ಡೀಲ್ ಮಾಡಿಕೊಂಡು ರಾಜ್ಯದ ಜನತೆ ಮುಂದೆ ನಗ್ನವಾಗಿದೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.
ಸಿದ್ದು ವಿರುದ್ಧ ಬಿಜೆಪಿ ಟ್ವೀಟ್
ರಾಜ್ಯ ಬಿಜೆಪಿ ರಾಜ್ಯಸಭೆ ಚುನಾವಣೆ, ಅಡ್ಡಮತದಾನ, ಪಕ್ಷಾಂತರ ಮುಂತಾದ ವಿಚಾರಗಳನ್ನು ಪ್ರಸ್ತಾಪಿಸಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿದ್ದು, ಪಕ್ಷಾಂತರ ಹಾಗೂ ಕುದುರೆ ವ್ಯಾಪಾರದ ವಿಚಾರ ಬಂದರೆ ವಲಸೆ ನಾಯಕ ಸಿದ್ದರಾಮಯ್ಯ ಅವರೇ ನಿಜವಾದ ಕಿಂಗ್ ಎಂದಿದೆ.
ಪ್ರತಿ ಶಾಸಕರಿಗೆ 50 ಲ. ರೂ.: ಗೌಡ ಆರೋಪ
ವಿಧಾನಪರಿಷತ್ ಚುನಾವಣೆಯಲ್ಲಿ ಇಂಚರ ಗೋವಿಂದರಾಜು ಗೆಲ್ಲಲು ಪ್ರತಿ ಶಾಸಕರಿಗೆ 50 ಲಕ್ಷ ರೂ. ಹಣ ನೀಡಿದ್ದರು. ನನಗೂ ಕೊಡಲು ಬಂದಿದ್ದರು ನಾನು ಪಡೆಯಲಿಲ್ಲ ಎಂದು ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರು ಆರೋಪಿಸಿದ್ದು, ಇದು ಕೂಡ ತೀವ್ರ ಚರ್ಚೆಗೆ ನಾಂದಿ ಹಾಡಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಹಣ ಪಡೆದು ಮತ ಹಾಕಿದ್ದಾರೆ. ಬಿಜೆಪಿಗೆ ಮತ ಹಾಕಿರುವುದು ನಿಜ, ದೇವರು ಶಿಕ್ಷೆ ಕೊಡುತ್ತಾರೆ. ಕುಮಾರಸ್ವಾಮಿ ಯಾರ್ಯಾರನ್ನೋ ಕರೆದುಕೊಂಡು ಬಂದು ಎಂಎಲ್ಎ ಮಾಡುತ್ತಾರೆ. ಅವರೇ ಬೆನ್ನಿಗೆ ಚೂರಿ ಹಾಕುತ್ತಾರೆ.
– ಎಚ್.ಡಿ.ರೇವಣ್ಣ, ಜೆಡಿಎಸ್ ಶಾಸಕ
ಅಡ್ಡ ಮತದಾನ ಮಾಡಿದ ಇಬ್ಬರಿಗೂ ನೋಟಿಸ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಮತ ಕೊಟ್ಟು ವಿಪ್ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡು ಆರು ವರ್ಷ ಚುನಾವಣೆಗೆ ಸ್ಪರ್ಧೆ ಮಾಡದಂತೆ ಮಾಡುತ್ತೇವೆ.
-ಸಿ.ಎಂ.ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ