ಜಮಖಂಡಿ :ಈಜಲು ಹೋದ ಯುವಕ ನೀರು ಪಾಲು
Team Udayavani, Mar 20, 2021, 6:24 PM IST
ಜಮಖಂಡಿ : ನಗರದ ಅರಮನೆಯ ಹತ್ತಿರ ರಾಣಿ ಕೆರೆಯಲ್ಲಿ ಈಜಲು ಹೋದ ಯುವಕ ಸಾವನ್ನಪ್ಪಿದ ಘಟನೆ ಶನಿವಾರ (ಮಾ.20) ನಡೆದಿದೆ.
ಮೃತ ವ್ಯಕ್ತಿಯನ್ನು ತಾಲೂಕಿನ ಆಲಗೂರ ಗ್ರಾಮದ ಆಕಾಶ ತುಕಾರಾಮ ಗುರವ್ವ (18) ಎಂದು ಗುರುತಿಸಲಾಗಿದ್ದು, ಈತ ಮತ್ತು ಈತನ 6 ಜನ ಸ್ನೇಹಿತರು ರಾಮತೀರ್ಥ ಅರಮನೆಯ ಹತ್ತಿರದ ರಾಣಿ ಕೆರೆಯಲ್ಲಿ ಪ್ರತಿ ನಿತ್ಯ ಓಟದ ಸ್ಪರ್ಧೆ ಮುಗಿಸಿದ ನಂತರ ಈಜು ಕಲಿಯಲು ಬರುತ್ತಿದ್ದರು. ಎಲ್ಲರೂ ಬಿ.ಎಸ್.ಎಫ್ ಯೋಧರಾಗುವ ಕನಸು ಕಟ್ಟಿಕೊಂಡಿದರು. ಹೀಗಾಗಿ ಪ್ರತಿ ನಿತ್ಯ ಈಜು ಮತ್ತು ಓಟವನ್ನು ಕಲಿಯುತ್ತಿದ್ದರು ಎನ್ನಲಾಗಿದೆ.
ಸಾಯಂಕಾಲ ಈಜಲು ಹೋಗಿದ ಯುವಕ ನೀರಿನಲ್ಲಿ ಮುಳುಗಿದ್ದು, ಈತನ ಶವದ ಪತ್ತೆಯ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಹಾಗೂ ಈಜುಗಾರರ ತಂಡ ಬೋಟ್ ನ ಮೂಲಕ ತಡರಾತ್ರಿಯವರೆಗೆ ಶೋಧ ಕಾರ್ಯಾಚರಣೆ ನಡೆಸಿದರು. ಕತ್ತಲು ಆವರಿಸಿದ ಹಿನ್ನೆಲೆಯಲ್ಲಿ ಶವ ಪತ್ತೆಯಾಗದ ಕಾರಣ ವಾಪಾಸ್ ಮರಳಿದರು.
ಇದನ್ನೂ ಓದಿ:ವಿಶ್ವ ಹ್ಯಾಪಿನೆಸ್ ವರದಿ 2021 : ಫಿನ್ ಲ್ಯಾಂಡ್ ಗೆ ಮೊದಲ ಸ್ಥಾನ, ಭಾರತಕ್ಕೆ?
ಬೆಳಗಿನ ಜಾವ ಮತ್ತೆ ಪೋಲಿಸ್ ಇಲಾಖೆ. ಅಗ್ನಿಶಾಮಕ ದಳ. ಈಜುಗಾರರ ತಂಡದೊಂದಿಗೆ ಬೋಟಿನ ಮೂಲಕ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆ ಹಚ್ಚಿ ಮೇಲೆ ಎತ್ತಾಯಿತು. ಈ ಸಮಯದಲ್ಲಿ ಶವವನ್ನು ನೋಡಿದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಗ್ರಾಮೀಣ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಇಂಗಳೆ. ಗ್ರಾಮೀಣ ಠಾಣೆ ಪಿ ಎಸ್ ಐ. ಬಸವರಾಜ ಅವಟಿ ಪೋಲಿಸ್ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಶಾಮಕ ದಳ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ