ಲಿಂಗಾಯತ ವೀರಶೈವ ಎಲ್ಲ ಉಪ ಪಂಗಡಗಳನ್ನು ಓಬಿಸಿಗೆ ಸೇರಿಸಲು ಒತ್ತಾಯ
Team Udayavani, May 15, 2022, 4:40 PM IST
ಬೆಂಗಳೂರು: ಲಿಂಗಾಯತ ವೀರಶೈವ ಸಮುದಾಯದ ಎಲ್ಲ ಉಪ ಪಂಗಡಗಳನ್ನೂ ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.
ಮಹಾ ಸಭಾದ ಕಾರ್ಯದರ್ಶಿ ಈಶ್ವರ್ ಖಂಡ್ರೆ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ, ”ಸರ್ವರಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ ಸಮಾಜ ಇದಾಗಿದೆ. ಆದರೆ ಬಸವತತ್ವ ಅನುಯಾಯಿಗಳಾದ ಲಿಂಗಾಯತ ವೀರಶೈವರೇ ಇಂದು ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವುದು ನಿಜಕ್ಕೂ ದೌರ್ಭಾಗ್ಯ”ಎಂದರು.
ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವೀರಶೈವ ಮತ್ತು ಲಿಂಗಾಯಿತ ಸಮುದಾಯದ ಜನರಿದ್ದು, ಕರ್ನಾಟಕದಲ್ಲಿ ಸುಮಾರು ಶೇ.18ರಿಂದ 20ರಷ್ಟು ಲಿಂಗಾಯತ- ವೀರಶೈವರಿದ್ದಾರೆ ಎಂದು ಜನಗಣತಿಯಲ್ಲಿ ಉಲ್ಲೇಖಿಸಲಾಗಿದೆ. ವೀರಶೈವ ಮತ್ತು ಲಿಂಗಾಯತರು ಮುಂದುವರಿದವರು ಎಂದು ಕೆಲವರು ವಾದಿಸುತ್ತಾರೆ. ಆದರೆ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿರುವ ಸಮುದಾಯದಲ್ಲಿ ಲಿಂಗಾಯತ ವೀರಶೈವ ಸಮುದಾಯ ಸೇರುತ್ತದೆ ಎಂದರು.
ಇಂದು ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಇರಲಿ, ಬ್ಯಾಂಕಿಂಗ್ ನೇಮಕಾತಿ ಮಂಡಳಿಯೇ ಇರಲಿ, ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಆಗಿರಲಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್.ಎಸ್.ಸಿ. ನೇಮಕಾತಿ ಆಗಿರಲಿ ಅಥವಾ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ನೇಮಕಾತಿಯೇ ಆಗಿರಲಿ ಇವುಗಳಲ್ಲಿ ಲಿಂಗಾಯತ ಮತ್ತು ವೀರಶೈವ ಸಮುದಾಯದಿಂದ ಆಯ್ಕೆಯಾಗಿ ನೇಮಕಗೊಂಡಿರುವ ಪಾಲು ನಗಣ್ಯ. ಇದಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಈ ಸಮುದಾಯ ಹಿಂದುಳಿದಿರುವುದೇ ಕಾರಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ