DKಗೆ ಶಾಕ್ ಮೇಲೆ ಶಾಕ್, ITಗೆ ಚಳ್ಳೆಹಣ್ಣು ತಿನ್ನಿಸಲು ಜ್ಯೋತಿಷಿ ಯತ್ನ


Team Udayavani, Aug 3, 2017, 3:54 PM IST

DKS.jpg

ಬೆಂಗಳೂರು: ಗುಜರಾತ್ ಶಾಸಕರಿಗೆ ಈಗಲ್ ಟನ್ ರೆಸಾರ್ಟ್ ನಲ್ಲಿ ಆತಿಥ್ಯ ನೀಡಿದ ಬೆನ್ನಲ್ಲೇ ರಾಜ್ಯದ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿಕೆ ಸುರೇಶ್, ಸಂಬಂಧಿ ರವಿ, ಮಾವ ತಿಮ್ಮಯ್ಯ ಸಹಿತ ಸ್ನೇಹಿತರ ನಿವಾಸ, ಕಚೇರಿ ಸೇರಿ 30ಕ್ಕೂ ಅಧಿಕ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಏಕಾಏಕಿ ದಾಳಿ ನಡೆಸಿದ್ದು, ಗುರುವಾರವೂ ಕೂಡಾ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲಿನ ದಾಳಿ ಮುಂದುವರಿದಿದೆ.  ನಿನ್ನೆಯ ದಾಳಿಯ ವೇಳೆಯೂ ಹಲವು ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದವು. ಇಂದು ಕೂಡಾ ಅದೇ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಆದರೆ ಐಟಿ ಅಧಿಕಾರಿಗಳು ಈವರೆಗೂ ಯಾವುದೇ ಖಚಿತ ಮಾಹಿತಿ ನೀಡಿಲ್ಲ.

ಐಟಿ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಡಿಕೆಶಿ ಆಪ್ತ ಗುರೂಜಿ?

ಐಟಿ ದಾಳಿಗೊಳಗಾದ ಡಿಕೆಶಿ ಅವರ ಆಪ್ತ ಜ್ಯೋತಿಷಿ ದ್ವಾರಕನಾಥ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ. ಐಟಿ ಅಧಿಕಾರಿಗಳ ದಾಳಿ ನಂತರ ದ್ವಾರಕನಾಥ ತಮ್ಮ ಮನೆಯ ಹಿಂದಿನ 2 ಗೇಟ್ ಗಳನ್ನು ತೆರೆದು ಅದರಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಾಗಾಟ ಮಾಡಿಸಿದ್ದಾರೆನ್ನಲಾಗಿದೆ.

ಡಿಕೆಶಿ ಪರ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ:

ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ, ಸಚಿವ ಡಿಕೆ ಶಿವಕುಮಾರ್ ನಿವಾಸ, ಕಚೇರಿ, ಸಂಬಂಧಿಕರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ. ಅಲ್ಲದೇ ಸಚಿವ ಡಿಕೆಶಿಯನ್ನು ಬೆಂಬಲಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯೂ ಕಟ್ಟಪ್ಪಣೆ ವಿಧಿಸಿದ್ದಾರೆನ್ನಲಾಗಿದೆ. ರಾಜ್ಯದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಂಯ್ಯ ಸೇರಿದಂತೆ ಎಲ್ಲಾ ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು ಡಿಕೆಶಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಡಿಕೆಶಿ ಮನೆ, ಕಚೇರಿಗಳಲ್ಲಿ 11.43 ಕೋಟಿ ವಶ, ಮೈಸೂರಿನಲ್ಲಿರುವ ಮಾವ ತಿಮ್ಮಯ್ಯನವರ ಮನೆಯಲ್ಲಿ 60 ಲಕ್ಷ ಹಾಗೂ ನವದೆಹಲಿಯ ಡಿಕೆಶಿ ಮನೆಯಲ್ಲಿ 8.33 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಸಿಂಗಾಪುರ ಸೇರಿದಂತೆ ವಿದೇಶದಲ್ಲೂ ಡಿಕೆಶಿ ಹೂಡಿಕೆ ಪತ್ತೆ?

ಡಿಕೆ ಶಿವಕುಮಾರ್ ಅವರು ಸಿಂಗಾಪುರ ಸೇರಿದಂತೆ ವಿದೇಶಗಳಲ್ಲಿ ಹೂಡಿಕೆ ಮಾಡಿರುವುದು ಕೆಲ ದಾಖಲೆಗಳಿಂದ ಪತ್ತೆಯಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಬಗ್ಗೆ ಐಟಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಮ್ಯಾರಥಾನ್ ದಾಳಿ ಸಾಧ್ಯತೆ?

ಬುಧವಾರ ಬೆಳಗ್ಗೆಯಿಂದ ಐಟಿ ಅಧಿಕಾರಿಗಳು ನಿರಂತರವಾಗಿ ಡಿಕೆ ಶಿವಕುಮಾರ್ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಗುರುವಾರವೂ ಕೂಡಾ ಶೋಧ ಕಾರ್ಯ ಮುಂದುವರಿದಿದ್ದು, ಡಿಕೆಶಿ ಒಡೆತನದ ಗ್ಲೋಬಲ್ ಕಾಲೇಜು ಮೇಲೂ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿರುವ  ಕೆಪಿಟಿಸಿಎಲ್, ಕೆಪಿಸಿಎಲ್  ಕಚೇರಿ ಮೇಲೂ ದಾಳಿ ಸಾಧ್ಯತೆ, ವಿಧಾನಸೌಧದ ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆ ಇದ್ದಿರುವುದಾಗಿ ವರದಿಗಳು ತಿಳಿಸಿವೆ.

ಡಿಕೆಶಿ ಕಂಗಾಲು:

ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಈಗಲ್ ಟನ್ ರೆಸಾರ್ಟ್ ನಿಂದ ಸದಾಶಿವನಗರದ ಕೆಂಕೇರಿ ನಿವಾಸಕ್ಕೆ ವಿಚಾರಣೆಗಾಗಿ ಡಿಕೆಶಿ ಅವರನ್ನು ಕರೆತಂದಾಗ ಮನೆಯ ಎದುರು ಜಮಾಯಿಸಿದ್ದ ಕಾರ್ಯಕರ್ತರತ್ತ ಕೈ ಬೀಸಿ ಏನೂ ಆಗಲ್ಲ ಎಂದು ಸಮಾಧಾನದ ಭಾವ ಪ್ರದರ್ಶಿಸಿದ್ದರು. ಆದರೆ ದಾಳಿಯಿಂದ ಮುಖದಲ್ಲಿ ದುಗುಡ ಕಂಡುಬಂದಿತ್ತು. ಆದರೆ ಗುರುವಾರ ಡಿಕೆಶಿ ಮನೆಯಿಂದ ಹೊರಗೆ ಬಂದಿಲ್ಲ. ಐಟಿ ಅಧಿಕಾರಿಗಳ ಇಂಚಿಂಚು ಶೋಧ, ದಾಳಿಯಿಂದಾಗಿ ಡಿಕೆಶಿ ಹಾಗೂ ಕುಟುಂಬ ಕಂಗಾಲಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

2 ಸೂಟ್ ಕೇಸ್ ಭರ್ತಿ ದಾಖಲೆ ವಶ

ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸದಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ತಿ 2 ಸೂಟ್ ಕೇಸ್ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.