ಎಂಜಿನಿಯರಿಂಗ್‌ ಶುಲ್ಕ ಶೇ.10ರಷ್ಟು ಹೆಚ್ಚಳ?

ಖಾಸಗಿ ಕಾಲೇಜುಗಳ ನಿರ್ಧಾರ ಇನ್ನೂ ಅಂತಿಮ ವಾಗಿಲ್ಲ: ಸರಕಾರ

Team Udayavani, Jun 16, 2022, 7:35 AM IST

ಎಂಜಿನಿಯರಿಂಗ್‌ ಶುಲ್ಕ ಶೇ.10ರಷ್ಟು ಹೆಚ್ಚಳ?

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಸಂಬಂ ಧಿಸಿ ಶೇ.10ರಷ್ಟು ಶುಲ್ಕ ಹೆಚ್ಚಳ ಮಾಡಲು ಎಂಜಿನಿಯರಿಂಗ್‌ ಕಾಲೇಜುಗಳ ಆಡಳಿತ ಮಂಡಳಿ ಗಳು ನಿರ್ಧರಿಸಿವೆ.

ಕಳೆದ ವರ್ಷ ಶೇ.25ರಷ್ಟು ಶುಲ್ಕ ಹೆಚ್ಚಳಕ್ಕೆ ಕಾಲೇಜುಗಳು ಬೇಡಿಕೆ ಇಟ್ಟಿದ್ದರೂ ಕೊರೊನಾ ಕಾರಣದಿಂದ ಸರಕಾರ ಒಪ್ಪಿರಲಿಲ್ಲ. ಆದರೆ ಇತರ ಶುಲ್ಕವಾಗಿ ಗರಿಷ್ಠ 20 ಸಾವಿರ ರೂ. ಪಡೆಯಲು ಅವಕಾಶ ನೀಡಿತ್ತು.

ಈ ಸಂಬಂಧ “ಉದಯ ವಾಣಿ’ ಜತೆಗೆ ಮಾತನಾಡಿದ ಕರ್ನಾಟಕ ಅನುದಾನಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಒಕ್ಕೂಟದ (ಕೆಯುಪಿ ಇಸಿಎ) ಅಧ್ಯಕ್ಷ ಮಂಜುನಾಥ ಭಂಡಾರಿ, ಕಳೆದ ವರ್ಷ ಸರಕಾರದ ಮನವಿಗೆ ಸ್ಪಂದಿಸಿ ದ್ದೆವು. ಅದೇ ಸಭೆಯಲ್ಲಿ 2022-23ನೇ ಸಾಲಿನಿಂದ ಪ್ರತೀ ವರ್ಷ ಶೇ.10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿತ್ತು ಎಂದು ಹೇಳಿದರು.

ಆದರೆ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಸಂಬಂಧ ಇನ್ನೂ ಸಭೆ ನಡೆಸಿಲ್ಲ. ಸಭೆ ನಡೆಸಿದ ಬಳಿಕ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

2017-18ನೇ ಸಾಲಿನ ಬಳಿಕ ಅಂದರೆ, ಐದು ವರ್ಷದಿಂದ ಶುಲ್ಕ ಹೆಚ್ಚಳವಾಗಿಲ್ಲ. ಇತ್ತೀಚೆಗಷ್ಟೇ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ (ಎಐಸಿಟಿಇ) ಕೂಡ ಕನಿಷ್ಠ 1.48 ಲಕ್ಷ ರೂ.ಗಳಿಂದ ಗರಿಷ್ಠ 1.78 ಲಕ್ಷ ರೂ.ಗಳ ವರೆಗೆ ಶುಲ್ಕ ಪಡೆಯಬಹುದು ಎಂದು ಹೇಳಿದೆ. ಆದ್ದರಿಂದ ಶುಲ್ಕ ಹೆಚ್ಚಳ ಅನಿವಾರ್ಯವಾಗಿದೆ ಎಂದು ಮಂಜುನಾಥ ಭಂಡಾರಿ ತಿಳಿಸಿದರು.

ಸದ್ಯ ಕೆಇಎ ಮೂಲಕ ಪ್ರವೇಶ ಪಡೆಯುವ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ 65,360 ರೂ. ಇದೆ. ಶೇ.10 ಹೆಚ್ಚಿಸಿದರೆ 71,896 ರೂ. ಆಗಲಿದೆ. ಕಾಮೆಡ್‌-ಕೆ ಕೋಟಾದ ಸೀಟುಗಳಿಗೆ ಪ್ರವೇಶ ಶುಲ್ಕ 1,43,748 ರೂ.ಗಳಿದ್ದು, ಇದು 1,58,118ಕ್ಕೆ ತಲುಪಲಿದೆ.

ಇಂದಿನಿಂದ ಸಿಇಟಿ ಪರೀಕ್ಷೆ
ಎಂಜಿನಿಯರಿಂಗ್‌ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಗುರುವಾರದಿಂದ (ಜೂ.16) ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ಯು ರಾಜ್ಯದ 486 ಕೇಂದ್ರಗಳಲ್ಲಿ ನಡೆಯಲಿದೆ. ಶೇ.75ರಷ್ಟು ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ಶೇ.30ರಷ್ಟು ಕೇಂದ್ರಗಳಲ್ಲಿ ವೀಡಿಯೋ ಚಿತ್ರೀಕರಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.