ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ
ಮುಂಜಾಗ್ರತಾ ಕ್ರಮಗಳೇನು?
Team Udayavani, Mar 22, 2023, 8:50 AM IST
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, 4 ಜಿಲ್ಲೆಗಳಲ್ಲಿ ನಿಗಾವಹಿಸಲಾಗಿದೆ.
ಕಳೆದ ಒಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಕೊರೊನಾ ಏರಿಕೆಯಾಗಿರುವುದು ಆತಂಕ ಹುಟ್ಟಿಸಿದೆ.
ಶಿವಮೊಗ್ಗ, ಕಲಬುರಗಿ, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ.
ಇದೀಗ ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯು ಕೊವಿಡ್ ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆಗೆ ಒತ್ತು ಕೊಡಲು ಸೂಚಿಸಿದೆ. ಸೋಂಕಿನ ಬಗ್ಗೆ ತೀವ್ರ ನಿಗಾ ವಹಿಸಲು ಹೇಳಿದೆ.
ಮಾ.8ರಿಂದ ಕಳೆದ ಎರಡು ವಾರದ ಅವಧಿಯಲ್ಲಿ ಪಾಸಿಟಿವಿಟಿ ದರ ಶೇ.2.77 ಹೆಚ್ಚಾಗಿದೆ. ದೇಶದಲ್ಲಿ ಎಚ್3ಎನ್2 ಸೋಂಕಿನಿಂದ ಬಹಳಷ್ಟು ಜನ ಬಳಲುತ್ತಿರುವುದು ಆತಂಕ ಹುಟ್ಟಿಸಿದೆ.
ಮುಂಜಾಗ್ರತಾ ಕ್ರಮಗಳೇನು?: ಅಂತಾರಾಷ್ಟ್ರೀಯ ಪ್ರಯಾಣಿಕರು, ಸ್ಥಳೀಯವಾಗಿ ವರದಿಯಾಗುವ ಕ್ಲಸ್ಟರ್ ಪ್ರಕರಣಗಳಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಪರೀಕ್ಷೆ ನಡೆಸುವುದು, ಸೋಂಕಿನ ಲಕ್ಷಣಗಳು ಕಂಡು ಬಂದರೆ ನಿಗದಿತವಾಗಿ ಪರೀಕ್ಷೆ ನಡೆಸುವುದು, ಹೊಸದಾಗಿ ಹಾಗೂ ಕ್ಲಸ್ಟರ್ ಮಾದರಿಯಲ್ಲಿ ವರದಿಯಾಗುವ ಸೋಂಕು ಪ್ರಕರಣಗಳ ಮೇಲ್ವಿಚಾರಣೆ ಮಾಡುವುದು, ಐಎಲ್ ಐ (ವಿಷಮ ಶೀತ ಜ್ವರ) ಹಾಗೂ ಸಾರಿ (ತೀವ್ರ ಉಸಿರಾಟ ಸಮಸ್ಯೆ) ಪ್ರಕರಣಗಳನ್ನು ಪತ್ತೆಹಚ್ಚುವುದು ಸೇರಿ ಇನ್ನಿತರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಯು ಮುಂದಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ