ಸಾಲದ ಹೊರೆ ಹೆಚ್ಚಳ; ಕೃಷಿ ಬೆಳವಣಿಗೆ ಕುಂಠಿತ


Team Udayavani, Jun 26, 2019, 3:05 AM IST

salada

ಬೆಂಗಳೂರು: “ರಾಜ್ಯದಲ್ಲಿ ಒಂದೆಡೆ ಸಾಲದ ಹೊರೆ ಹೆಚ್ಚುತ್ತಿದ್ದರೆ ಮತ್ತೂಂದೆಡೆ ಕೃಷಿ ಬೆಳವಣಿಗೆ ಕುಂಠಿತಗೊಳ್ಳುತ್ತಿದ್ದು, ನಕಾರಾತ್ಮಕ ಹಾದಿಯಲ್ಲಿ ಸಾಗುತ್ತಿದೆ’ ಎಂದು 15ನೇ ಹಣಕಾಸು ಆಯೋಗ ಕಳವಳ ವ್ಯಕ್ತಪಡಿಸಿದೆ.

ದೇಶದಲ್ಲಿ ಆರ್ಥಿಕ ಹೊಣೆಗಾರಿಕೆ ಕಾಯ್ದೆ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಆ ಕಾಯ್ದೆ ವ್ಯಾಪ್ತಿಯೊಳಗೇ ರಾಜ್ಯವು ಆರ್ಥಿಕ ಶಿಸ್ತು ಕಾಪಾಡಿಕೊಂಡಿದೆ. ಆದರೆ, ಕಳೆದ ಏಳೆಂಟು ವರ್ಷಗಳಲ್ಲಿ ಬಜೆಟ್‌ಗೆ ಹೊರತಾದ ಸಾಲದ ಪ್ರಮಾಣ ಆರರಿಂದ ಏಳುಪಟ್ಟು ಹೆಚ್ಚಳ ಆಗಿದೆ.

2011-12ರಲ್ಲಿ 1,853.62 ಕೋಟಿ ಇತ್ತು. 2017-18ರಲ್ಲಿ 13,173.44 ಕೋಟಿ ರೂ. ತಲುಪಿದೆ. ಜತೆಗೆ ಕೃಷಿ ಬೆಳವಣಿಗೆಯೂ ಶೇ-0.3ಕ್ಕೆ ಕುಸಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಒತ್ತುಕೊಡುವ ಅವಶ್ಯಕತೆಯಿದೆ ಎಂದು 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್‌.ಕೆ. ಸಿಂಗ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನೀರಾವರಿಗೆ ವಿಪುಲ ಅವಕಾಶ: ರೈತರ ಅನುಕೂಲಕ್ಕಾಗಿ ರಾಷ್ಟ್ರೀಯ ಇ-ಮಾರುಕಟ್ಟೆ ಸೇವೆಗಳು (ಆರ್‌ಇಎಂಎಸ್‌), ಎಲೆಕ್ಟ್ರಾನಿಕ್‌ ಹರಾಜು ವ್ಯವಸ್ಥೆ ಸೇರಿ ಹಲವು ಉಪಕ್ರಮಗಳನ್ನು ಅಳವಡಿಸಿಕೊಂಡಿರುವುದು ತೃಪ್ತಿಕರವಾಗಿದೆ. ಆದರೆ, ಅವುಗಳು ನಿರೀಕ್ಷಿತ ಮಟ್ಟದಲ್ಲಿ ಫ‌ಲ ನೀಡುತ್ತಿಲ್ಲ.

ಇದಕ್ಕೆ ಪೂರಕವಾಗಿ ಕಳೆದ ಒಂದು ದಶಕದಲ್ಲಿ ರಾಜ್ಯವು ಎಂಟು ಬಾರಿ ಬರಕ್ಕೆ ತುತ್ತಾಗಿದೆ. ಆದರೆ, ರಾಜಸ್ತಾನದ ಸ್ಥಿತಿ ಇದಕ್ಕಿಂತ ಭೀಕರವಾಗಿದ್ದರೂ ಅಲ್ಲಿ ಕೃಷಿ ಬೆಳವಣಿಗೆ ಪ್ರಮಾಣ ಸಕಾರಾತ್ಮಕವಾಗಿದ್ದು, ಶೇ.3ರಷ್ಟು ವೃದ್ಧಿ ಕಾಣಬಹುದು. ಹಾಗಾಗಿ, ಈ ಹಿನ್ನೆಲೆಯಲ್ಲಿ ಕೃಷಿ ಬೆಳವಣಿಗೆಗೆ ಇನ್ನಷ್ಟು ಪೂರಕ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ ಎಂದು ಹೇಳಿದರು.

ರಾಜ್ಯದಲ್ಲಿರುವ ಒಟ್ಟಾರೆ ಕೃಷಿ ಭೂಮಿಯಲ್ಲಿ ಶೇ. 33ರಷ್ಟು ಮಾತ್ರ ನೀರಾವರಿ ಸೌಲಭ್ಯ ಒಳಗೊಂಡಿದೆ. ಈ ಮಧ್ಯೆ ಹಲವಾರು ನೀರಾವರಿ ಯೋಜನೆಗಳು ಅಪೂರ್ಣವಾಗಿವೆ. ಅಂದರೆ ನೀರಾವರಿಗೆ ಇನ್ನೂ ಸಾಕಷ್ಟು ಅವಕಾಶಗಳಿವೆ. ಆದ್ಯತೆ ಮೇರೆಗೆ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು.

ಮಳೆ ನೀರು ಕೊಯ್ಲು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದ ಅವರು, ಕಳೆದೆರಡು ವರ್ಷಗಳಲ್ಲಿ ಮೂರು ಬೆಳೆ ಸಾಲ ಮನ್ನಾ ಯೋಜನೆಗಳನ್ನು ಘೋಷಿಸಿದ್ದು, ಅದರ ಅಂದಾಜು ಮೊತ್ತ 47,419 ಕೋಟಿ ರೂ. ಆಗುತ್ತದೆ ಎಂದು ಮಾಹಿತಿ ನೀಡಿದರು.

ತಲಾದಾಯವೂ ಅಧಿಕ – ಬಡತನವೂ ಹೆಚ್ಚು: ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ, ರಾಜ್ಯದ ತಲಾದಾಯವು ಸಾಕಷ್ಟು ಹೆಚ್ಚಿದೆ. ಆದರೆ, ಮತ್ತೂಂದೆಡೆ ಅತ್ಯಂತ ಬಡತನವೂ ಇಲ್ಲಿದೆ ಎಂದು ಎನ್‌.ಕೆ. ಸಿಂಗ್‌ ಅಚ್ಚರಿ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಅನೂಪ್‌ ಸಿಂಗ್‌, ರಮೇಶ್ಚಂದ್‌, ಅರವಿಂದ್‌ ಮೆಹ್ತಾ, ಅಜಯ್‌ ನಾರಾಯಣ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಆದಾಯದಲ್ಲಿ ಕುಸಿತ: ಸರಕು ಸೇವಾ ತೆರಿಗೆ (ಜಿಎಸ್‌ಟಿ)ಯಿಂದ ರಾಜ್ಯದ ಆದಾಯದಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡುಬಂದಿದ್ದು, ಶೇ. 23ರಷ್ಟು ಇಳಿಮುಖವಾಗಿದೆ ಎಂದು ಸರ್ಕಾರವು 15ನೇ ಹಣಕಾಸು ಆಯೋಗದ ಗಮನಸೆಳೆದಿದೆ. 2018-19ರಲ್ಲಿ 12,407.75 ಕೋಟಿ ರೂ.ಗಳಷ್ಟು ಆದಾಯ ಕುಸಿತವಾಗಿದೆ.

ಅಲ್ಲದೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಜಾಹೀರಾತು ತೆರಿಗೆ ರೂಪದಲ್ಲಿ 200 ಕೋಟಿ ರೂ. ಬಂದಿದೆ. ಅದೂ ಈ ಜಿಎಸ್‌ಟಿಯಲ್ಲಿ ಹೋಗಿಬಿಟ್ಟಿದೆ ಎಂದು ಸರ್ಕಾರ ಬೇಸರ ವ್ಯಕ್ತಪಡಿಸಿದೆ. ಈ ಬಗ್ಗೆಯೂ ಆಯೋಗದ ಅಧ್ಯಕ್ಷ ಎನ್‌.ಕೆ. ಸಿಂಗ್‌ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.