ಜ್ವರದ ಪ್ರಮಾಣ ಹೆಚ್ಚಳ: ತಜ್ಞರ ಜತೆ ಸಚಿವರ ಚರ್ಚೆ
Team Udayavani, Mar 6, 2023, 6:43 AM IST
ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಜ್ವರದ ಪ್ರಮಾಣದ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತಜ್ಞರ ಜತೆಗೆ ಸಚಿವ ಸುಧಾಕರ್ ಸಭೆ ನಡೆಸಲಿದ್ದಾರೆ.
ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಎಚ್3ಎನ್2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಚರ್ಚಿಸಿ ಸಭೆಯ ಬಳಿಕ ಮಾಹಿತಿ ನೀಡುವುದಾಗಿ ಸುಧಾಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.