ಮೀಸಲು ಪ್ರಮಾಣ ಹೆಚ್ಚಳ ಕಾಂಗ್ರೆಸ್ ಕೂಸು: ಡಿ.ಕೆ.ಶಿವಕುಮಾರ್
Team Udayavani, Oct 24, 2022, 11:20 PM IST
ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ ಕಾಂಗ್ರೆಸ್ನ ಕೂಸು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೀಸಲಾತಿ ನೀಡುವ ವಿಚಾರವಾಗಿ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿದ್ದೆವು. ಕಾಂಗ್ರೆಸ್ ಪಕ್ಷ ಕೂಡ ಈ ಸಮಿತಿ ವರದಿ ಜಾರಿಗೆ ಆಗ್ರಹಿಸಿತ್ತು. ಈ ಸಮುದಾಯ ದವರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂಬುದು ಕಾಂಗ್ರೆಸ್ ಇಚ್ಛೆ, ನಡೆ ಹಾಗೂ ನಂಬಿಕೆ ಆಗಿತ್ತು ಎಂದರು.
ಕಾಂಗ್ರೆಸ್ ಪಕ್ಷವು ಮೀಸಲಾತಿ ಪ್ರಮಾಣ ಹೆಚ್ಚಿಸಲು ಸಮಿತಿ ರಚಿಸಿ, ಹೋರಾಟ ಮಾಡಿ ಈಗ ಈ ಮೀಸಲಾತಿ ನೀಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬಿಜೆಪಿಯವರು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಆದರೆ ಮಾಡಲಿಲ್ಲ.
ಈಗ ಕೊನೆ ಗಳಿಗೆಯಲ್ಲಿ ಒತ್ತಡ ಹೆಚ್ಚಾದ ಕಾರಣ ಮಾಡಿದ್ದಾರೆ. ಅವರಿಗೆ ಪರಿಶಿಷ್ಟರ ಮೇಲೆ ನಂಬಿಕೆ ಇರಲಿಲ್ಲ. ಇದ್ದಿದ್ದರೆ ಇಷ್ಟು ದಿನ ಕಾಲಹರಣ ಮಾಡದೇ ಅಧಿಕಾರಕ್ಕೆ ಬಂದ ದಿನವೇ ಮಾಡುತ್ತಿದ್ದರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ