ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ
Team Udayavani, Jul 7, 2022, 1:31 PM IST
ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್ ನಾಯಕರು ಮತ್ತು 75 ಸಾವಿರದಿಂದ ಒಂದು ಲಕ್ಷ ಕಾರ್ಯಕರ್ತರು ಬೆಂಗಳೂರಲ್ಲಿ ಮೆರವಣಿಗೆ ಮಾಡಲಿದ್ದಾರೆ ಎಂದರು.
ಇದರ ಜತೆಗೆ 75 ಕಿ.ಮೀ.ಪಾದಯಾತ್ರೆ ಮಾಡಲು ಹೇಳಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆಯಲಾಗಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ
ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?