ಪಕ್ಷೇತರ ಸ್ಪರ್ಧೆ ನನಗೆ ಹೊಸದಲ್ಲ
Team Udayavani, Apr 3, 2019, 3:00 AM IST
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ಕಾರಣಕ್ಕಾಗಿ ಪಕ್ಷ ವಿಳಂಬ ಮಾಡುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹಿಂಸೆಯಾಗಿದೆ. ಪಕ್ಷೇತರ ಸ್ಪರ್ಧೆ ನನಗೆ ಅಸಾಧ್ಯ ಅಂತೇನಿಲ್ಲ.
ಹಿಂದೆ ವಿಧಾನಸಭೆಗೆ ಪಕ್ಷೇತರನಾಗಿ ಗೆಲುವು ಸಾಧಿಸಿದ ಉದಾಹರಣೆಯಿದೆ ಎಂದು ಮಾಜಿ ಸಚಿವ ಹಾಗೂ ಟಿಕೆಟ್ ಆಕಾಂಕ್ಷಿ ವಿನಯ ಕುಲಕರ್ಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ಹಾಗೂ ಪಕ್ಷದ ಮುಖಂಡರನ್ನು ನಂಬಿದ್ದೇನೆ.
ಅವರು ಯಾವ ನಿರ್ದೇಶನ ನೀಡುತ್ತಾರೋ ಅಂದರಂತೆ ನಡೆದುಕೊಳ್ಳುತ್ತೇನೆ. ನಾಮಪತ್ರ ಸಲ್ಲಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ. ಸಾಕಷ್ಟು ದಾಖಲೆಗಳು ಬೇಕಾಗಿರುವ ಕಾರಣಕ್ಕೆ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಬಿ ಫಾರಂಗಾಗಿ ಕಾಯುತ್ತಿದ್ದೇನೆ ಎಂದರು.
ಟಿಕೆಟ್ ಘೋಷಣೆ ಇಷ್ಟೊಂದು ವಿಳಂಬ ಆಗಬಾರದಿತ್ತು. ಇದರಿಂದ ಪಕ್ಷದ ಕಾರ್ಯಕರ್ತರು ನೊಂದುಕೊಂಡಿದ್ದು, ಸಾಕಷ್ಟು ಟೀಕೆಗಳನ್ನು ಅನುಭವಿಸುವಂತಾಗಿದೆ. ಇಷ್ಟೆಲ್ಲ ಆದ ನಂತರ ಟಿಕೆಟ್ ಕೊಡುವುದು ಸೂಕ್ತವಲ್ಲ ಎನ್ನಿಸುತ್ತಿದೆ. ನಿತ್ಯವೂ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಿ ಬೇಸರ ಮೂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ