2047ಕ್ಕೆ ಭಾರತ ವಿಶ್ವಕ್ಕೆ ನಂ.1: ಉಪರಾಷ್ಟ್ರಪತಿ ಜಗದೀಪ ಧನಕರ್

ರಾಷ್ಟ್ರ ಉನ್ನತ ಸ್ಥಿತಿ ತಲುಪುವುದು ನಿಶ್ಚಿತ....ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ

Team Udayavani, Mar 1, 2024, 7:20 PM IST

1-aw-ewewqe

ಧಾರವಾಡ : ಶತಮಾನಗಳ ಹಿಂದೆ ವಿಶ್ವಕ್ಕೆ ಮಾದರಿಯಾಗಿದ್ದ ಭಾರತ ಇದೀಗ ಮತ್ತೆ ಪುಟಿದೇಳಲಿದ್ದು, 2047ಕ್ಕೆ ಅಭಿವೃದ್ಧಿ ಹೊಂದಿದ ವಿಶ್ವದ ನಂ.1 ರಾಷ್ಟ್ರವಾಗಲಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.

ನಗರದ ಧಾರವಾಡ ಐಐಟಿ ಕ್ಯಾಂಪಸ್‌ನಲ್ಲಿ ಸೆಂಟ್ರಲ್ ಲರ್ನಿಂಗ್ ಥಿಯೇಟರ್(ಸಿಎಲ್‌ಟಿ), ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ(ಕೆಆರ್‌ಡಿಸಿ), ಎರಡು ಹೊಸ ಪ್ರವೇಶ ದ್ವಾರಗಳನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಭಾರತ ಭವ್ಯತೆ ಕಡೆಗೆ ಸಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಕಳೆದ ಹತ್ತು ವರ್ಷಗಳಲ್ಲಿ ರಕ್ಷಣೆ, ಬಾಹ್ಯಾಕಾಶ, ಮಹಿಳಾ ಸಬಲೀಕರಣ, ಹೊಸ ಅವಿಷ್ಕಾರಗಳು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಮೈ ಕೊಡವಿ ಎದ್ದು ನಿಂತಿದೆ. ಏನೇ ಅಡೆತಡೆಗಳು ಬಂದರೂ ಸುಸ್ಥಿರವಾಗಿ ಅಭಿವೃದ್ಧಿಯತ್ತ ಸಾಗುತ್ತಿರುವ ಭಾರತ ಖಂಡಿತವಾಗಿಯೂ 2047ಕ್ಕೆ ಅಂದರೆ ಸ್ವಾತಂತ್ರ್ಯದ ಶತಮಾನೋತ್ಸವಕ್ಕೆ ಖಂಡಿತವಾಗಿಯೂ ವಿಶ್ವದ ನಂ.1 ಭವ್ಯ ರಾಷ್ಟ್ರವಾಗಿ ಭಾರತ ತಲೆಎತ್ತಿ ನಿಲ್ಲಲಿದೆ ಎಂದರು.

2030 ಕ್ಕೆ ನಂ.3 ಆರ್ಥಿಕ ಶಕ್ತಿ
ಸದ್ಯ ವಿಶ್ವವೇ ಭಾರತದತ್ತ ಬೆರಗುಗಣ್ಣನಿಂದ ನೊಡುತ್ತಿದೆ. ಇಡೀ ವಿಶ್ವವೇ ನಮ್ಮ ತಾಂತ್ರಿಕತೆ ಎದುರು ನೋಡುತ್ತಿದೆ. ಭಾರತದ ಚಂದ್ರಯಾನ ಯಶಸ್ವಿಗೆ ಜಗತ್ತಿನ ಇತಿಹಾಸದಲ್ಲಿ ದಾಖಲಾಗಿದೆ. ಜಗತ್ತಿನ ಆರ್ಥಿಕತೆಯಲ್ಲಿ ಭಾರತ 5 ನೇ ಸ್ಥಾನದಲ್ಲಿದ್ದು,2030 ಕ್ಕೆ ಮೊದಲ ಮೂರು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವುದು ನಿಶ್ಚಿತ.ಭಾರತ ಸರ್ಕಾರ ನವೀನ ತಂತ್ರಜ್ಞಾನ ಆವಿಷ್ಕಾರಕ್ಕೆ ಸಾಕಷ್ಟು ಆದ್ಯತೆ, ಪ್ರೋತ್ಸಾಹ ನೀಡುತ್ತಿದೆ. ಇಸ್ರೋ ಅವಕಾಶಗಳ ಬಾಗಿಲು ತೆರೆದಿದೆ. ಸೈಕಲ್ ಮೇಲೆ ಉಪಗ್ರಹ ಹೇರಿಕೊಂಡು ಹೋದ ದೇಶದಲ್ಲಿ ಇಂದು ಚಂದ್ರ ಮತ್ತು ಸೂರ್ಯರತ್ತ ಸಾಗುತ್ತಿದ್ದೇವೆ. ಅಷ್ಟೇಯಲ್ಲ, ಗಗನಯಾನಕ್ಕೂ ನಾಲ್ವರನ್ನು ಭಾರತ ಸಜ್ಜು ಮಾಡಿದ್ದು ವಿಶ್ವಕ್ಕೆ ಭಾರತ ಎನು ಎಂಬುದನ್ನು ತೋರಿಸಿದಂತಾಗಿದೆ ಎಂದರು.

ಉತ್ತಮ ಭವಿಷ್ಯವಿದೆ
ಧಾರವಾಡ ಐಐಟಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಿದ ಉಪರಾಷ್ಟ್ರಪತಿಗಳು, ಜೀವನದಲ್ಲಿ ವಿಫಲತೆಗೆ ಭಯಪಡುವ ಅಗತ್ಯ ಇಲ್ಲ. ನಮ್ಮ ಪ್ರಯತ್ನ ಎಂದಿಗೂ ಬಿಡಬಾರದರು. ತಂತ್ರಜ್ಞಾನ ಯುಗದಲ್ಲಿ ಪದವೀಧರರ ಅಗತ್ಯ ಬಹಳಷ್ಟಿದೆ. ಅವಕಾಶಗಳು ಸಹ ವಿಫಲವಾಗಿವೆ. ಹೀಗಾಗಿ ಅವುಗಳನ್ನು ಸದ್ಬಳಕೆ ಮಾಡಿಕೊಂಡು, ದೇಶಕ್ಕೆ ಕೊಡುಗೆ ನೀಡಬೇಕುಛ ಮೂಲಕ ತಾಯ್ನಾಡಿನ ಋಣ ತೀರಿಸಲು ಹೇಳಿದರು.
ಧಾರವಾಡ ಐಐಟಿ ವಿಶ್ವಮಟ್ಟದ ಮೂಲಸೌಕರ್ಯ ಹೊಂದಿದೆ. ಮುಂದೊಂದು ದಿನ ಖಂಡಿತವಾಗಿಯೂ ಧಾರವಾಡ ಐಐಟಿ ದೇಶದ ಶ್ರೇಷ್ಠ ಐಐಟಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.

ಭಾರತೀಯತೆಯೇ ವಿಶ್ವಾಸ
ಇನ್ನು ಭಾರತೀಯತೆಯೇ ಶ್ರೇಷ್ಠವಾಗಿದ್ದು ರಾಷ್ಟ್ರಧರ್ಮದಲ್ಲಿ ಎಲ್ಲರೂ ನಂಬಿಕೆ ಇಟ್ಟುಕೊಳ್ಳಬೇಕಾಗಿದೆ. ಇದರಿಂದ ರಾಷ್ಟ್ರವು ಉನ್ನತ ಸ್ಥಿತಿ ತಲುಪುವುದು ನಿಶ್ಚಿತ. ಆದರೆ ಇದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದು ಬೇಸರದ ಸಂಗತಿ. ಅದೇನಿದ್ದರೂ ಸರಿ ಯುವ ಪೀಳಿಗೆ ಮಾತ್ರ ರಾಷ್ಟ್ರಧರ್ಮ ಭಾರತೀಯತೆಯತ್ತ ಮುಖಮಾಡಬೇಕು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಐಐಟಿ ನಿರ್ದೇಶಕ ವೆಂಕಪ್ಪಯ್ಯ ದೇಸಾಯಿ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.