ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…


Team Udayavani, Dec 6, 2020, 6:04 AM IST

Village

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಳ್ಳಿಗಳ ಆಡಳಿತ ಮತ್ತು ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ಆಮೂಲಾಗ್ರ ತಿದ್ದುಪಡಿಗಳನ್ನು ತಂದು ಕೆಲವೊಂದು ಮಹತ್ತರ ಬದಲಾವಣೆಗಳನ್ನು ಮಾಡಲಾಯಿತು. ಈ ತಿದ್ದುಪಡಿ ಕಾಯ್ದೆಯಡಿ ದೇಶದಲ್ಲಿಯೇ ಮೊದಲ ಬಾರಿಗೆ ಸಂವಿಧಾನದ ಮಾದರಿಯಲ್ಲಿ “ಪಂಚಾಯತ್‌ ನೀತಿ ನಿರ್ದೇಶಕ’ಗಳನ್ನು ಪರಿಚಯಿಸಲಾಯಿತು. ಗ್ರಾಮ ಪಂಚಾಯತ್‌ಗಳಿಗೆ ಈಗ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಓದುಗರು ಅವುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಆಶಯದೊಂದಿಗೆ ಸಂಕಿ³ಪ್ತ ಮಾಹಿತಿ ನೀಡಲಾಗಿದೆ.

ಸಂವಿಧಾನದ 73ನೇ ತಿದ್ದುಪಡಿಯ ಉದ್ದೇಶ ವನ್ನು ಈಡೇರಿಸುವುದಕ್ಕಾಗಿ ಜನರು ಹೆಚ್ಚಿನ ರೀತಿಯಲ್ಲಿ ಗ್ರಾಮ ಸ್ವರಾಜ್‌ನ ಸ್ಥಳೀಯ ಸ್ವಯಂ ಆಡಳಿತದಲ್ಲಿ ಭಾಗವಹಿಸಲು ಗ್ರಾಮ, ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಪಂಚಾಯತ್‌ರಾಜ್‌ ವ್ಯವಸ್ಥೆ ಸ್ಥಾಪನೆ.

ಗ್ರಾಮೀಣ ಜನರ ಜೀವನಮಟ್ಟವನ್ನು ಸುಧಾರಿ ಸಲು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ.

ವ್ಯಾಜ್ಯ ಮುಕ್ತ, ಶೋಷಣೆ ಮುಕ್ತ, ಭಯ ಮುಕ್ತ ಸಮಾನತಾವಾದಿ ರಾಜ್ಯವನ್ನಾಗಿ ಮಾಡುವುದು.

ಬಯಲು ಬಹಿರ್ದೆಸೆ ಮುಕ್ತ ಸ್ವತ್ಛ ಗ್ರಾಮಗಳನ್ನಾಗಿ ಮಾಡುವುದು. ಮಹಿಳೆಯರನ್ನು ಸಶಕ್ತಗೊಳಿಸುವುದು ಮತ್ತು ಲಿಂಗ ಸಮಾನತೆಯನ್ನು ಸಾಧಿಸಲು ಪಂಚಾಯತ್‌ರಾಜ್‌ ವ್ಯವಸ್ಥೆಯ ಬಲವರ್ಧನೆ.

ಆರ್ಥಿಕ ಪ್ರಗತಿ, ಸಾಮಾಜಿಕ ಸಮಾನತೆಯನ್ನು ಸಾಧಿಸಲು ಸಾಮಾಜಿಕವಾಗಿ ವಂಚಿತರಾದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದು. ಆರ್ಥಿಕ ಚಟುವಟಿಕೆಗಳ ಮೂಲಕ ಗ್ರಾಮೀಣ ಜನತೆಗೆ ಪರ್ಯಾಯ ಆದಾಯ ಮೂಲಗಳನ್ನು ಕಲ್ಪಿಸುವುದು. ಮೂಲ ಸೌಕರ್ಯಗಳನ್ನು ಒದಗಿಸಿ ಜನರ ಜೀವನ ಮಟ್ಟದಲ್ಲಿ ಸುಧಾರಣೆ.

ಸೃಜನಶೀಲ, ಹೆಮ್ಮೆಯ, ಸ್ವಾವಲಂಬಿ, ಸಂಪದ್ಭರಿತ ಮತ್ತು ಸಾಮರಸ್ಯ ಸಮಾಜ ನಿರ್ಮಾಣ.

ಜನಸವತಿ ಸಭೆ, ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳನ್ನು ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ಸ್ಥಾಪನೆಗೆ ವೇದಿಕೆಗಳನ್ನಾಗಿ ಬಳಸಿಕೊಳ್ಳುವುದು.

ಎಲ್ಲರಿಗೂ ಶುದ್ಧ ಕುಡಿಯುವ ನೀರು, ಆರೋಗ್ಯ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಸಮುದಾಯದ ಜೀವನಮಟ್ಟ ಸುಧಾರಣೆ.

ಅಗತ್ಯ ಗ್ರಾಮೀಣ ಸೌಲಭ್ಯಗಳನ್ನು ಒದಗಿಸಿ ಗ್ರಾಮೀಣ ಸಮುದಾಯಗಳು ಮತ್ತು ಸಂಘಟನೆಗಳು ಗ್ರಾಮದ ಸುಧಾರಣೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು.

ಗ್ರಾಮ ವಾಸಿಗಳ ಆರ್ಥಿಕ, ಸಾಮಾಜಿಕ ಮತ್ತು ಪರಿಸರಾತ್ಮಕ ಗುಣಮಟ್ಟವನ್ನು ವೃದ್ಧಿಸುವುದಕ್ಕಾಗಿ ಆಸ್ತಿಗಳ ನಿರ್ವಹಣೆ ಮತ್ತು ಸುಸ್ಥಿರ ಅಭಿವೃದ್ಧಿ ಗಾಗಿ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಮುದಾ ಯವನ್ನು ತೊಡಗಿಸಿಕೊಳ್ಳುವುದು.

ಪಂಚಾಯತ್‌ ಅಧೀನದಲ್ಲಿರುವ ಸಂಪನ್ಮೂಲ ಗಳನ್ನು ಬಳಕೆ ಮಾಡಿಕೊಂಡು ಪಂಚಾಯತ್‌ ವ್ಯಾಪ್ತಿಯ ಅರಣ್ಯ ಮತ್ತು ವನ್ಯಜೀವಿಗಳ ಸುಸ್ಥಿರ ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗಾಗಿ ಅವುಗಳನ್ನು ಸಂರಕ್ಷಣೆ.

ಸ್ಥಳೀಯ ಸಮುದಾಯ ಕಲೆ, ಸಂಸ್ಕೃತಿ, ಪರಂಪರೆ ಗಳನ್ನು ರಕ್ಷಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ.

ನವಣೆ, ಸಜ್ಜೆ, ಬಿಳಿ ಜೋಳ, ಸಾಮೆ, ಸಾವೆ, ಕೋರ್ಲಿ ಇತ್ಯಾದಿ ಮತ್ತು ಔಷಧೀಯ ಮೌಲ್ಯವುಳ್ಳ ಗಿಡಮೂಲಿಕೆಗಳಂತಹ ದೇಸಿ ವೈವಿಧ್ಯವುಳ್ಳ ಬೀಜಗಳ ಸಂರಕ್ಷಣೆ ಮತ್ತು ಅಭಿವೃದ್ಧಿ.

ಕೃಷಿ-ಕೈಗಾರಿಕೆ ಕೇಂದ್ರಗಳನ್ನು ಗ್ರಾಮೀಣ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ಉದ್ಯೋಗಳನ್ನು ಸೃಷ್ಟಿ ಮಾಡುವುದು ಮತ್ತು ಕೈಗಾರಿಕೆ-ವಾಣಿಜ್ಯ ಚಟುವಟಿಕೆಗಳ ಅರ್ಜಿ ಸ್ವೀಕಾರಕ್ಕೆ ಏಕಗವಾಕ್ಷಿ ವ್ಯವಸ್ಥೆ ಜಾರಿ.

ರಾಷ್ಟ್ರೀಯ ಮತ್ತು ರಾಜ್ಯ ಕಾರ್ಯ ನೀತಿಗಳಿಗೆ ಅನುಸಾರವಾಗಿ ತಳಮಟ್ಟದಲ್ಲಿ ಸಹಕಾರಿ ಸಂಸ್ಥೆಗಳನ್ನು ಪ್ರೋತ್ಸಾಹಿಸುವ ಮೂಲಕ ಸಹಕಾರಿ ಮನೋಭಾವ ಮತ್ತು ವಾತಾವರಣ ನಿರ್ಮಾಣ.

ಗ್ರಾಮೀಣ ಪ್ರದೇಶಗಳಲ್ಲಿನ ಕೌಶಲ, ಜ್ಞಾನ, ಇತರ ಸಾಮರ್ಥಯಗಳಿಗೆ ಅನುಗುಣವಾಗಿ ಗ್ರಾಮೀಣ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಸಶಕ್ತೀಕರಣ.

ಶಾಂತಿಯುತ ಸಮಾಜ ಮತ್ತು ಕೋಮು ಸೌಹಾರ್ದವನ್ನು ಸಂರಕ್ಷಿಸುವ ಹಾಗೂ ಎಲ್ಲ ರೀತಿಯ ಹಿಂಸೆಗಳನ್ನು ತಡೆಗಟ್ಟುವ ಸುರಕ್ಷಿತ ಮತ್ತು ಸಹನಶೀಲ ಸಮುದಾಯವನ್ನು ಪೋಷಿಸುವುದು.

ಗ್ರಾಮಗಳಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಹಾನಿ ಉಂಟು ಮಾಡುವ ಬೆಳವಣಿಗೆಗಳು ನಡೆದಾಗ ಅವುಗಳನ್ನು ತಡೆಗಟ್ಟಬೇಕು. ಸಾಲಬಾಧೆ, ಬಡತನ ಮತ್ತಿತರ ಕಾರಣಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.