ಕೆಜಿಎಫ್ನಲ್ಲಿ ಕೈಗಾರಿಕಾ ಹಬ್: ಜಗದೀಶ್ ಶೆಟ್ಟರ್
Team Udayavani, Mar 19, 2021, 8:20 PM IST
ಬೆಂಗಳೂರು: ಕೋಲಾರದ ಕೆಜಿಎಫ್ನಲ್ಲಿ ಶೀಘ್ರದಲ್ಲೇ ಕೈಗಾರಿಕಾ ಹಬ್ ಪ್ರಾರಂಭಿಸಲು ಸರಕಾರ ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಶಾಸಕಿ ರೂಪಕಲಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್ ಸಮೀಪ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ ಹಾದು ಹೋಗುತ್ತದೆ. ಇಲ್ಲಿ ಕೈಗಾರಿಕಾ ಹಬ್ ಮಾಡುವುದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಹೀಗಾಗಿ ಸರಕಾರ ಕ್ರಮ ಕೈಗೊಂಡಿದೆ ಎಂದರು.
ಚಿನ್ನದ ನಿಕ್ಷೇಪ ಸಮೀಕ್ಷೆ
ಕೆಜಿಎಫ್ನಲ್ಲಿ ಸ್ಥಗಿತಗೊಂಡಿರುವ ಚಿನ್ನದ ಗಣಿ ನಿಕ್ಷೇಪವನ್ನು ಪುನರಾರಂಭಿಸುವ ಬಗ್ಗೆ ಡ್ರೋಣ್ ಮೂಲಕ ಸಮೀಕ್ಷೆ ನಡೆಸುತ್ತಿದ್ದೇವೆ. ಈ ಪ್ರಕ್ರಿಯೆ ಎರಡು ಮೂರು ತಿಂಗಳಲ್ಲಿ ಮುಗಿಯಲಿದ್ದು, ಅನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಬಿಡುಗಡೆಗೊಂಡಿದೆ ದೇಸಿ ಆ್ಯಪ್ ಸ್ಟೋರ್ ‘ಮೊಬೈಲ್ ಸೇವಾ’..!
ಬಿಇಎಂಎಲ್ ಖಾಸಗೀಕರಣಕ್ಕೆ ವಿರೋಧ
ಕೆಜಿಎಫ್ನಲ್ಲಿರುವ ಬಿಇಎಂಎಲ್ ಸಂಸ್ಥೆ ಲಾಭದಲ್ಲಿದ್ದರೂ ಕೇಂದ್ರ ಸರಕಾರ ಖಾಸಗಿಗೆ ನೀಡಲು ಮುಂದಾಗಿದೆ. ರಾಜ್ಯಾದ್ಯಂತ 11,300 ಸಾವಿರ ಬಿಇಎಂಎಲ್ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಲಾಭದಲ್ಲಿದ್ದರೂ ಕೇಂದ್ರ ಸರಕಾರ ಇದನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ತಿಂಗಳಿಗೆ ನೂರಾರು ಕೋಟಿ ಹಾಗೂ ವರ್ಷಕ್ಕೆ ಸಾವಿರಾರು ಕೋಟಿ ರೂ. ಲಾಭ ಬರುತ್ತದೆ. ಇಲ್ಲಿರುವ ಬಂಡವಾಳವನ್ನು ಹಿಂದೆಗೆಯಲು ಕೇಂದ್ರ ಸರಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಚರ್ಚೆಗೆ ಆಗ್ರಹಿಸಿದರು. ಆದರೆ, ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಗೆ ಅವಕಾಶ ಇಲ್ಲ ಎಂದು ಸ್ಪೀಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ