ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಇಂಡಸ್ಟ್ರಿ ಹಬ್‌

ವಿದ್ಯಾರ್ಥಿಗಳಿಗೆ ಉದ್ಯೋಗ ಮಾರ್ಗದರ್ಶನ, ಕೈಗಾರಿಕಾನುಭವ

Team Udayavani, Dec 30, 2020, 6:08 AM IST

Udayavani Kannada Newspaper

ಬೆಂಗಳೂರು: ಎಂಜಿನಿಯರಿಂಗ್‌ ಕಾಲೇಜು ಮತ್ತು ಕೈಗಾರಿಕೆಗಳ ನಡುವೆ ನೇರ ಸಂಪರ್ಕ ಸಾಧಿಸಲು ಹಾಗೂ ವಿದ್ಯಾರ್ಥಿಗಳ ಇಂಟರ್ನ್ಶಿಪ್‌, ಪ್ರಾಜೆಕ್ಟ್ ವರ್ಕ್‌, ಉದ್ಯೋಗ ಅವಕಾಶ, ಕೌಶಲಾಭಿವೃದ್ಧಿ, ಮಾರ್ಗದರ್ಶನಕ್ಕಾಗಿ “ಇಂಡಸ್ಟ್ರಿ ಹಬ್‌’ ಅಸ್ತಿತ್ವಕ್ಕೆ ಬರಲಿದೆ.

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಉದ್ಯೋಗ ಅವಕಾಶ, ಮಾರ್ಗದರ್ಶನ, ಕೈಗಾರಿಕೆಗಳಿಗೆ ಪ್ರಸ್ತುತ ಸನ್ನಿವೇಶದಲ್ಲಿ ಅಗತ್ಯವಿರುವ ಕೌಶಲವನ್ನೇ ಮುಖ್ಯವಾಗಿ ಇರಿಸಿಕೊಂಡು ಇಂಡಸ್ಟ್ರಿ ಹಬ್‌ ರಚನೆಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಕಾಲೇಜುಗಳು ಗುರುತಿಸುವ ನಿರ್ದಿಷ್ಟ ಸ್ಥಳಗಳಲ್ಲಿ ಈ ಖಾಸಗಿ ಸಂಸ್ಥೆಯು ಇಂಡಸ್ಟ್ರಿ ಹಬ್‌ ರಚನೆಗೆ ಬೇಕಾದ ವ್ಯವಸ್ಥೆ ಮಾಡಲಿದೆ. ಇದಕ್ಕಾಗಿ ಪ್ರತೀ ಕಾಲೇಜಿನಲ್ಲೂ ಪ್ರತ್ಯೇಕ ಸ್ಥಳ ಮೀಸಲಿಡಲು ಸೂಚನೆ ನೀಡಿದ್ದೇವೆ ಎಂದು ವಿಟಿಯು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ವಿಟಿಯು ಸಂಯೋಜಿತ 209 ಮತ್ತು 19 ಸ್ವಾಯತ್ತ ಎಂಜಿನಿಯರಿಂಗ್‌ ಕಾಲೇಜುಗಳಿವೆ. ಈ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಡಸ್ಟ್ರಿ ಕುರಿತ ಹ್ಯಾಂಡ್‌-ಆನ್‌ (ನೇರ) ಅನುಭವ ನೀಡುವ ಕಾರ್ಯವನ್ನು ಈ ಹಬ್‌ಗಳು ಮಾಡಲಿವೆ. ಇಂಡಸ್ಟ್ರಿ ಹಬ್‌ ರಚನೆ ಬಗ್ಗೆ ಜ. 25ರೊಳಗೆ ಮಾಹಿತಿ ನೀಡಬೇಕು ಎಂದು ವಿಟಿಯು ಕುಲಸಚಿವರು ಎಲ್ಲ ಎಂಜಿನಿಯರಿಂಗ್‌ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಅಂತಿಮ ವರ್ಷದವರಿಗೆ ಹೆಚ್ಚು ಅನುಕೂಲ
ಹಬ್‌ನಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಉದ್ಯೋಗಾವಕಾಶ, ಅಗತ್ಯ ಕೌಶಲ ಇತ್ಯಾದಿ ಮಾಹಿತಿ ಸಿಗುತ್ತದೆ. ಆಕರ್ಷಕ ಮತ್ತು ಅತ್ಯಂತ ಪರಿಣಾಮಕಾರಿ ಪ್ರಾಜೆಕ್ಟ್ ವರ್ಕ್‌, ಇಂಟರ್ನ್ಶಿಪ್‌ ಕಾರ್ಯಕ್ರಮದ ಸಂಪೂರ್ಣ ವಿವರ ಮತ್ತು ಸದ್ಬಳಕೆ, ಉದ್ಯೋಗ ಪೂರ್ವ ತರಬೇತಿ ಇತ್ಯಾದಿ ನೀಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏನಿದು ಇಂಡಸ್ಟ್ರಿ ಹಬ್‌?
ಇಂಡಸ್ಟ್ರಿ ಹಬ್‌ನಡಿ ಖಾಸಗಿ ಸಂಸ್ಥೆ ಆಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕಾ ವಲಯದ ತಜ್ಞರನ್ನು ಕರೆಸಿ ಓರಿಯಂಟೇಶನ್‌, ಇಂಟರ್ನ್ಶಿಪ್‌ ಅವಕಾಶಗಳು, ಪ್ರಾಜೆಕ್ಟ್ ವರ್ಕ್‌, ಮೂಲ ಕೌಶಲ ತರಬೇತಿ, ಉದ್ಯೋಗಾವಕಾಶದ ಮಾಹಿತಿ ನೀಡಲಿದೆ. ಇಂಡಸ್ಟ್ರಿ ಹಬ್‌ನಡಿ ಖಾಸಗಿ ಸಂಸ್ಥೆ ಆಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕಾ ವಲಯದ ತಜ್ಞರನ್ನು ಕರೆಸಿ ಓರಿಯಂಟೇಶನ್‌, ಇಂಟರ್ನ್ಶಿಪ್‌ ಅವಕಾಶಗಳು, ಪ್ರಾಜೆಕ್ಟ್ ವರ್ಕ್‌, ಮೂಲ ಕೌಶಲ ತರಬೇತಿ, ಉದ್ಯೋಗಾವಕಾಶದ ಮಾಹಿತಿ ನೀಡಲಿದೆ.

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.