ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಸೋಂಕು ಪರೀಕ್ಷೆ
ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ
Team Udayavani, Sep 1, 2021, 10:00 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ನೆರೆಯ ಬಾಂಗ್ಲಾದೇಶ, ಭೂತಾನ್, ಚೀನಾ ಸೇರಿದಂತೆ ಸೋಂಕು ಹೆಚ್ಚಿರುವ ಹೊರದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಸೋಂಕು ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಈ ಹಿಂದೆ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಯುರೋಪ್ ಹಾಗೂ ಮಧ್ಯ ಪೂರ್ವ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಬುಧವಾರ ರಾಜ್ಯ ಸರ್ಕಾರ ಹೊರಡಿಸಿರುವ ಪರಿಷ್ಕೃತ ಸುತ್ತೋಲೆಯಲ್ಲಿ ಬಾಂಗ್ಲಾದೇಶ, ಭೂತಾನ್, ಚೀನಾ, ಮಾರಿಷಿಯಸ್, ನ್ಯೂಜಿಲ್ಯಾಂಡ್ ಹಾಗೂ ಜಿಂಬಾಂಬ್ವೆಯಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ಸೋಂಕು ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತು ರಾಜ್ಯದ ವಿಮಾಣ ನಿಲ್ದಾಣಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ತಿಳಿಸಲಾಗಿದೆ.
ಇದನ್ನೂ ಓದಿ:ಪ್ರಚಾರಕ್ಕೆ ರಮೇಶ ಜಾರಕಿಹೊಳಿ ದಿಢೀರ್ ಎಂಟ್ರಿ
ರಾಜ್ಯದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸೋಂಕು ಪರೀಕ್ಷಾ ವರದಿ ಇದ್ದರೂ, ಮತ್ತೊಮ್ಮೆ ಇಲ್ಲಿ ಪರೀಕ್ಷೆ ನಡೆಸಬೇಕು. ಪ್ರಯಾಣಿರು ಗಂಟಲು ದ್ರವ ನೀಡಿ ಮನೆಗೆ ತೆರಳಬಹುದು. ಪರೀಕ್ಷಾ ವರದಿ ಬರುವರೆಗೂ ಹೋಂ ಕ್ವಾರಂಟೈನ್ ಇರಬೇಕು. ರೂಪಾಂತರ ಸೋಂಕು ಹೆಚ್ಚಿರುವ ಬ್ರೆಜಿಲ್, ದಕ್ಷಿಣ ಆಫ್ರಿಕಾದಿಂದ ಬರುವವರು ಮಾತ್ರ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗೆ ಮಾದರಿ ನೀಡಿ, ವರದಿ ಬರುವವರೆಗೂ ಕಾಯಬೇಕು. ನೆಗೆಟಿವ್ ಬಂದರೆ ಮಾತ್ರ ಮನೆಗೆ ತೆರಳಬಹುದು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಆಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ