ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ
Team Udayavani, Oct 10, 2018, 9:28 AM IST
ಮೈಸೂರು: ವಿಶ್ವವಿಖ್ಯಾತ ದಸರಾಗೆ ಬುಧವಾರ ಬೆಳಗ್ಗೆ 7.05ರಿಂದ 7.30ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಚಾಲನೆ ನೀಡಿದರು.
ಈ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,ಸಚಿವ ಸಾ.ರಾ ಮಹೇಶ್,ಜಿ.ಟಿ.ದೇವೇಗೌಡ, ಶಾಸಕ ಎಸ್.ಎ.ರಾಮ್ದಾಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೊಡಗಿನಲ್ಲಿ ನಿರಾಶ್ರಿತರಾದವರಿಗೆ ಮನೆ ಕಟ್ಟಿಕೊಡಲು 25 ಕೋಟಿ ರೂಪಾಯಿಗಳನ್ನು ಕೊಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ.
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಳಗ್ಗೆ 10 ಗಂಟೆಗೆ ದರ್ಬಾರ್ ಹಾಲ್ನಲ್ಲಿ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಪ್ರತಿದಿನವೂ ಬೆಳಗ್ಗೆ 10 ಮತ್ತು
ಸಂಜೆ 7 ಗಂಟೆಗೆ 20 ನಿಮಿಷಗಳ ವರೆಗೆ ಖಾಸಗಿ ದರ್ಬಾರ್ ನಡೆಯಲಿದೆ.