ಕೇಂದ್ರ ಸಚಿವ ಸಂಪುಟದಲ್ಲಿ ಅನ್ಯಾಯ: ಶಾಮನೂರು
Team Udayavani, Jun 2, 2019, 3:00 AM IST
ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ವೀರಶೈವ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರಶೈವ ಸಮುದಾಯಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕಿತ್ತು. ಆದರೆ, ರಾಜ್ಯ ಖಾತೆ ಕೊಟ್ಟಿದ್ದು ಸರಿಯಲ್ಲ. ಯಡಿಯೂರಪ್ಪ ಈ ಬಗ್ಗೆ ಮೌನ ವಹಿಸಿದ್ದಾರೆ.
ಅವರ ಮುಖಂಡರು ತೆಗೆದುಕೊಂಡ ತೀರ್ಮಾನವಾದ್ದರಿಂದ ಅವರು ಸಮಾಧಾನ ಆಗಲೇಬೇಕು. ಹಿಂದೆ ಸಿದ್ದೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಿದ್ರು. ಅದೂ ಕೂಡ ರಾಜ್ಯ ಖಾತೆ ಆಗಿತ್ತು. ಅದರಿಂದ ಕೇವಲ, ಕಾರು, ಮನೆ, ಫೋನ್ ಮಾತ್ರ ಸಿಗುತ್ತದೆ.
ಆದರೆ, ಸಂಪುಟ ದರ್ಜೆ ನೀಡಿದರೆ ಗೌರವ ಇರುತ್ತದೆ ಎಂದರು. ವೀರಶೈವ-ಲಿಂಗಾಯತ ಸಮುದಾಯಕ್ಕೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ಬೇಕು ಎಂಬುದು ನಮ್ಮ ಬೇಡಿಕೆ. ಮುಂದಿನ ದಿನಗಳಲ್ಲಾದರೂ ನಮ್ಮ ಸಮುದಾಯಕ್ಕೆ ಎರಡರಿಂದ ಮೂರು ಸಚಿವ ಸ್ಥಾನಗಳನ್ನು ನೀಡಲಿ ಎಂದು ಅವರು ಒತ್ತಾಯಿಸಿದರು.
ಮೈತ್ರಿ ಸರ್ಕಾರ ನಡೆಯುತ್ತಿದೆ. ನಡೆಯುವಷ್ಟು ಕಾಲ ನಡೆಯುತ್ತೆ. ಇನ್ನೂ ಒಂದು ವರ್ಷ, ಇಪ್ಪತ್ತು ತಿಂಗಳ ಕಾಲ ನಡೆಯಬಹುದು. ನಡೆಯಲಿ. ಮೈತ್ರಿ ಮುಂದುವರಿಯಬೇಕು ಅಷ್ಟೇ.
-ಶಾಮನೂರು ಶಿವಶಂಕರಪ್ಪ ಅ.ಭಾ.ವೀರಶೈವ ಮಹಾಸಭಾ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ