ಸಿಎಂ ಬದಲಾವಣೆಗಾಗಿ ದೊಡ್ಡ ಸಂಧಾನ ಮಾಡುತ್ತಿದ್ದಾರೆ, ನನಗೂ ಆಮಿಷ ಒಡ್ಡಿದ್ದಾರೆ: ಯತ್ನಾಳ್
Team Udayavani, Dec 23, 2021, 11:58 AM IST
ಸುವರ್ಣಸೌಧ (ಬೆಳಗಾವಿ): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗಾಗಿ ದೊಡ್ಡ ದೊಡ್ಡ ಸಂಧಾನ ಮಾಡುತ್ತಿದ್ದಾರೆ ನಿಜ. ಆದರೆ ಇಂತವರನ್ನು ಒಪ್ಪುವ ಕೀಳುಮಟ್ಟದ ರಾಜಕಾರಣಿ ನಾನಲ್ಲ. ಇಂತಹ ಆಯೋಗ್ಯನ ಜೊತೆ ನಾನು ಸೇರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ತಿರುಗೇಟು ನೀಡಿದರು.
ಬುಧವಾರ ಸಚಿವ ಈಶ್ವರಪ್ಪ, ಯತ್ನಾಳ್, ಮುರುಗೇಶ್ ನಿರಾಣಿ ಸಭೆ ನಡೆಸಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, “ಮುಖ್ಯಮಂತ್ರಿ ಆಗುತ್ತೇನೆಂದು ಯಾರ್ಯಾರೋ ಹಗಲು ಕನಸು ಕಾಣುತ್ತಿದ್ದಾರೆ. ಸೂಟು ಹೊಲಿಸಿಕೊಂಡವರೂ ಇದ್ದಾರೆ. ದೊಡ್ಡವರಿಗೆ ಹಣ ಕೊಟ್ಟಿದ್ದೇನೆ, ರಿಸರ್ವ್ ಇಟ್ಟಿದ್ದೇನೆ ಎನ್ನುತ್ತಿದ್ದಾರೆ. ಆದರೆ ಇಲ್ಲಿ ಅವರ ಆಸೆಗಳು ನಡೆಯಲ್ಲ. ಇಲ್ಲಿ ಇರುವುದು ನರೇಂದ್ರ ಮೋದಿಯವರು. ಇಂತಹ ಆಯೋಗ್ಯರನ್ನು ವರಿಷ್ಠರು ಸಿಎಂ ಮಾಡುವುದಿಲ್ಲ. ಭೋಗದ ವಸ್ತುಗಳನ್ನ ಕೊಡುವವರನ್ನು ಸಿಎಂ ಮಾಡುವದಿಲ್ಲ” ಎಂದರು.
ಇದನ್ನೂ ಓದಿ:ಜನರ ಉತ್ತಮ ಭವಿಷ್ಯದ ಬದುಕನ್ನು ನಿರ್ಮಿಸುವ ಸರಕಾರ ನಮ್ಮದು: ಸಿಎಂ ಬೊಮ್ಮಾಯಿ
ನನಗೆ ಆಮಿಷ ಒಡ್ಡುತ್ತಿದ್ದಾರೆ. ಮಂತ್ರಿ ಮಾಡುತ್ತೇನೆ, ಡಿಸಿಎಂ ಮಾಡುತ್ತೇನೆ ಎನ್ನುತ್ತಿದ್ದಾರೆ. ಜನವರಿ ಎರಡನೇ ವಾರದಲ್ಲಿ ಸಿಎಂ ಆಗುತ್ತೇನೆಂದು ಕನಸು ಕಾಣುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಯತ್ನಾಳ್ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್