6 ಲಕ್ಷ ವಾಹನಗಳಿಗೆ ಸುರಕ್ಷಾ ಉಪಕರಣ ಅಳವಡಿಕೆ


Team Udayavani, Nov 4, 2022, 8:00 AM IST

6 ಲಕ್ಷ ವಾಹನಗಳಿಗೆ ಸುರಕ್ಷಾ ಉಪಕರಣ ಅಳವಡಿಕೆ

ಬೆಂಗಳೂರು: ಪ್ರಯಾಣಿಕರು, ಅದರಲ್ಲೂ ಮುಖ್ಯವಾಗಿ ಮಕ್ಕಳು ಹಾಗೂ ಮಹಿಳೆಯರ ಸುರಕ್ಷೆ ದೃಷ್ಟಿಯಿಂದ ಸಾರ್ವಜನಿಕ ಮತ್ತು ಖಾಸಗಿ ವಲಯದ ಪ್ರಯಾಣಿಕರ ಮತ್ತು ಸರಕು ಸಾಗಣೆಯ ಒಟ್ಟು 6.08 ಲಕ್ಷ ವಾಹನಗಳಿಗೆ  “ಸ್ಥಳಪತ್ತೆ ಹಚ್ಚುವ ಸಾಧನ ಮತ್ತು ತುರ್ತು ದಿಗಿಲು ಗುಂಡಿ’ (ಲೋಕೇಷನ್‌ ಟ್ರ್ಯಾಕಿಂಗ್‌ ಡಿವೈಸ್‌ ಹಾಗೂ ಎಮರ್ಜನ್ಸಿ ಪ್ಯಾನಿಕ್‌ ಬಟನ್‌) ಅಳವಡಿಸುವ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ, ಸಾರ್ವಜನಿಕ ಸೇವಾ ವಾಹನಗಳಿಗೆ  “ಸ್ಥಳಪತ್ತೆ ಹಚ್ಚುವ ಸಾಧನ ಮತ್ತು  ತುರ್ತು ದಿಗಿಲು ಗುಂಡಿ’ ಅಳವಡಿಸುವ ಯೋಜನೆಯನ್ನು 20.36 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಯೋಜನೆ  ಕುರಿತು ವಿವರಿಸಿದ ಸಚಿವರು, ಇದೊಂದು ದೊಡ್ಡ ಯೋಜನೆ. ಇದಕ್ಕೆ ಕೇಂದ್ರ ಸರಕಾರದ ಸಹಕಾರವೂ ಸಿಗಲಿದೆ. 60:40 ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನ ಬರಲಿದೆ. ಕೇಂದ್ರ ಸರಕಾರದ ಮೋಟಾರು ಅಧಿನಿಯಮ ಮತ್ತು ಕೇಂದ್ರ ಸರಕಾರದ ಅಧಿಸೂಚನೆಗಳನ್ವಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷೆ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷೆ ದೃಷ್ಟಿಯಿಂದ ಸಾರ್ವಜನಿಕ ಮಜಲು ವಾಹನಗಳು, ಟ್ಯಾಕ್ಸಿಗಳಲ್ಲಿ ಕಡ್ಡಾಯವಾಗಿ ಸ್ಥಳಪತ್ತೆ ಹಚ್ಚುವ ಸಾಧನ ಮತ್ತು ತುರ್ತು ದಿಗಿಲು ಗುಂಡಿ  ಅಳವಡಿಸಬೇಕಾಗಿದೆ. ಅದರಂತೆ ಸರಕಾರ ಈ ತೀರ್ಮಾನ ಕೈಗೊಂಡಿದೆ ಎಂದರು.

ಯೋಜನೆಯ ಪ್ರಯೋಜನಗಳು :

ಸಾರ್ವಜನಿಕ ಮತ್ತು ಖಾಸಗಿ ಪ್ರಯಾಣಿಕ ಮತ್ತು ಸರಕು ಸಾಗಣೆ ವಾಹನಗಳು, ಸಾರ್ವಜನಿಕ ಮಜಲು ವಾಹನಗಳು, ಖಾಸಗಿ ಮಜಲು ವಾಹನಗಳು, ಪ್ರವಾಸಿ ವಾಹನಗಳು, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ಗಳು ಸಹಿತ ಸಾರ್ವಜನಿಕ ಸೇವಾ ವಾಹನಗಳ ವೇಗ, ನಿಗದಿತ ನಿಲುಗಡೆ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆಯೇ? ನಿಗದಿತ ವೇಳೆಗೆ ಸ್ಥಳವನ್ನು ತಲುಪುತ್ತಿವೆಯೇ ಎಂಬುದನ್ನು ತಿಳಿದುಕೊಳ್ಳಬಹುದು. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಭಾರೀ ಪ್ರಮಾಣದ ವಾಹನಗಳು ಅತಿ ವೇಗದಲ್ಲಿ ಚಲಾಯಿಸಿ ಅಪಘಾತಕ್ಕೆ ಒಳಗಾಗುವುದನ್ನು ತಡೆಯಬಹುದು. ನಿಯಮ ಉಲ್ಲಂ ಸಿ ಚಾಲಕರು ಬೇರೆ ಮಾರ್ಗದಲ್ಲಿ ವಾಹನಗಳನ್ನು ಚಲಾಯಿಸುವುದಕ್ಕೆ ಕಡಿವಾಣ ಹಾಕಬಹುದು. ಚಾಲಕರ ವರ್ತನೆಯಿಂದ ಪ್ರಯಾಣಿಕರಿಗೆ ಆಗುವ ಅನನುಕೂಲತೆಗಳ ಮೇಲೆ ನಿಗಾ ಇಡಬಹುದು. ಸಮಾಜಘಾತಕ ಶಕ್ತಿಗಳಿಂದ ವಾಹನ ಮತ್ತು ಪ್ರಯಾಣಿಕರನ್ನು ರಕ್ಷಿಸಬಹುದು ಎಂದು ಸಚಿವರು ವಿವರಿಸಿದರು.

ಕೇಂದ್ರೀಕೃತ ವ್ಯವಸ್ಥೆಯ ಮೂಲಕ ನಿರ್ವಹಣೆ :  

ಕ್ಯಾಬ್‌, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ 4.51 ಲಕ್ಷ, ಶಾಲಾ ವಾಹನ ಮತ್ತು ಪ್ರಯಾಣಿಕರ ಬಸ್‌ಗಳು 16,432, ಖಾಸಗಿ ಮಜಲು ವಾಹನಗಳು 73,077, ಕೆಎಸ್‌ಆರ್‌ಟಿಸಿ ಮಜಲು ವಾಹನಗಳು 24,701, ಒಪ್ಪಂದ ವಾಹನಗಳು 5,138, ಅಖಿಲ ಭಾರತ ಪ್ರವಾಸಿ ವಾಹನಗಳು 1,940, ಬಸ್‌ಗಳು 71,248, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ ಸರಕು ವಾಹನಗಳು 85,944 ಸಹಿತ ಒಟ್ಟು 6,08,717 ವಾಹನಗಳಿಗೆ ಈ ಉಪಕರಣ ಅಳವಡಿಸಲಾಗುವುದು. ಎಲ್ಲ ವಾಹನಗಳಿಗೆ ಉಪಕರಣಗಳನ್ನು ಸಾರಿಗೆ ಇಲಾಖೆಯೇ ಅಳವಡಿಸಲಿದೆ. ಅಪಾಯದ ಸಂದರ್ಭದಲ್ಲಿ ಬಟನ್‌ ಒತ್ತುವ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಒಂದೇ ಕಡೆ ಎಲ್ಲವನ್ನೂ ನಿರ್ವಹಿಸಲಾಗುವುದು ಮತ್ತು ವಾಹನಗಳ ಮೇಲೆ ನಿಗಾ ಇಡಲಾಗುವುದು ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.