ಮೋದಿ ಸರ್ಕಾರದಿಂದ ರೈತ ಸಮುದಾಯಕ್ಕೆ ಅವಮಾನ: ಸಿದ್ದರಾಮಯ್ಯ
Team Udayavani, Dec 2, 2020, 3:46 PM IST
ಬೆಂಗಳೂರು: ರೈತರ ಜೊತೆಗೆ ಗಂಭೀರವಾಗಿ ಮಾತುಕತೆಯನ್ನು ನಡೆಸದೆ, ರೈತ ಹೋರಾಟಗಾರರನ್ನು ಭಯೋತ್ಪಾದಕರು, ಉಗ್ರಗಾಮಿಗಳು ಎಂದೆಲ್ಲ ದೂಷಿಸುತ್ತಿರುವ ಬಿಜೆಪಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಟ್ವೀಟ್ ಮಾಡಿರುವ ಅವರು, ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ ಉದ್ದಟತನ ಮತ್ತು ಅಪ್ರಮಾಣಿಕತೆಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.
ದಲಿತರ ಪರ, ಮಾನವಹಕ್ಕುಗಳ ಪರವಾಗಿ ಹೋರಾಡುವವರನ್ನು ‘ಅರ್ಬನ್ ನಕ್ಸಲ್ ಗಳೆಂದು, ಕೋಮುವಾದದ ವಿರುದ್ಧ ಹೋರಾಡುವವರನ್ನು ದೇಶದ್ರೋಹಿಗಳೆಂದು ದೂಷಿಸುತ್ತ ಬಂದ ನರೇಂದ್ರ ಮೋದಿ ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ ಎಂದಿದ್ದಾರೆ.
ಇದನ್ನೂ ಓದಿ:ಮಾಸ್ಕ್ ಧರಿಸಿ ಇಲ್ಲವೇ ಕೋವಿಡ್ ಕೇಂದ್ರದಲ್ಲಿ ಸೇವೆ ಸಲ್ಲಿಸಿ: ಗುಜರಾತ್ ಹೈಕೋರ್ಟ್
ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಿದ್ದೇವೆ ಎಂದು ಇಲ್ಲಿಯವರೆಗೆ ಬಡಾಯಿ ಬಿಡುತ್ತಾ ಬಂದ ಬಿಜೆಪಿ, ಈಗ ದೆಹಲಿಯಲ್ಲಿನ ರೈತ ಹೋರಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಕಾಂಗ್ರೆಸ್ ಪಕ್ಷ ರೈತ ಹೋರಾಟಗಾರರ ಹಿಂದೆ ಇಲ್ಲ, ಅವರ ಜೊತೆಯಲ್ಲಿದೆ ಎಂದರು.
ನರೇಂದ್ರ ಮೋದಿ ಸರ್ಕಾರ ರೈತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷಿಸುವ ದುಸ್ಸಾಹಸಕ್ಕೆ ಇಳಿಯದೆ, ತಕ್ಷಣ ಕೃಷಿಕ್ಷೇತ್ರಕ್ಕೆ ಮಾರಕವಾಗಿರುವ 3 ‘ಕಪ್ಪು ಕಾನೂನು’ಗಳನ್ನು ರದ್ದುಗೊಳಿಸಿ ಬಿಕ್ಕಟ್ಟನ್ನು ಪರಿಹರಿಸಬೇಕು. ಸರ್ಕಾರದ ನಿರ್ಲಕ್ಷದಿಂದ ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ಮೋದಿಯವರೇ ಕಾರಣರಾಗುತ್ತಾರೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
MUST WATCH
ಹೊಸ ಸೇರ್ಪಡೆ
ಬರಲಿದೆ “ಟೆಸ್ಲಾ ಮಾಡೆಲ್ 3” ಕಾರು : ವಿಶೇಷತೆಗಳೇನು..?
ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್ಗಳ ದೇಣಿಗೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ