ವಾಣಿಜ್ಯ ವಾಹನಗಳ ಚಾಲಕರಿಗೂ ವಿಮೆ


Team Udayavani, Mar 12, 2020, 3:05 AM IST

vanijya

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಹೊಸ ಓಟಿಎಸ್‌ ನೀತಿ ಜಾರಿ, ಅಸಂಘಟಿತ ಕಾರ್ಮಿಕರ ವಲಯದಲ್ಲಿ ನೋಂದಾಯಿಸಿ ಕೊಂಡಿರುವ ಖಾಸಗಿ ವಾಣಿಜ್ಯ ವಾಹನಗಳ ಚಾಲಕರಿಗೆ ಅಪಘಾತ ವಿಮೆ ಪರಿಹಾರ ನೀಡುವುದು ಸೇರಿದಂತೆ 40ಕ್ಕೂ ಹೆಚ್ಚು ಮಹತ್ವದ ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನ ಪಟೇಗಾರ ಪಾಳ್ಯದಲ್ಲಿ 11.50 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ರಸ್ತೆಯ ವೈಟ್‌ ಟಾಪಿಂಗ್‌ ಕಾಮಗಾರಿ ಮಂಜೂರಾತಿ ರದ್ದು, 2014-15ರಲ್ಲಿ 100 ತಾಲೂಕುಗಳಲ್ಲಿ ನೀರಿನ ಮಾದರಿ ಪರೀಕ್ಷೆ ನಡೆಸಿದ್ದ ರೇ ಎನ್ವಿರಾನ್‌ ಸಂಸ್ಥೆಯ ಬಾಕಿ ಶುಲ್ಕ ಬಿಡುಗಡೆ ಸಹ ಸಂಪುಟ ತೀರ್ಮಾನಗಳಲ್ಲಿ ಸೇರಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟದ ಪ್ರಮುಖ ನಿರ್ಧಾರಗಳು
-ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ)ವಿಧೇಯಕಕ್ಕೆ ಅನುಮೋದನೆ.

-ಕೆಎಸ್‌ಐಐಡಿಸಿಯಲ್ಲಿ ಹೊಸ ಒನ್‌ ಟೈಮ್‌ ಸೆಟಲ್ಮೆಂಟ್‌ ನೀತಿ ಜಾರಿ.

-ಅಸಂಘಟಿತ ವಲಯದ ವಾಣಿಜ್ಯ ವಾಹನಗಳ ಚಾಲಕರಿಗೂ ಅಪಘಾತ ವಿಮಾ ಪರಿಹಾರ.

-ಹೆಬ್ಬಾಳ ಬಳಿ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ 19 ಕೋಟಿ ರೂ.ವೆಚ್ಚದಲ್ಲಿ 4 ನಿವಾಸಗಳ ನಿರ್ಮಾಣ.

-ಕಾರವಾರದ ಪೋರ್ಟ್‌ ಆಫೀಸರ್‌ ಆಗಿ ನಿವೃತ್ತ ನೌಕಾಧಿಕಾರಿ ಅರುಣ್‌ ಗಾಂವ್ಕರ್‌ ಮುಂದುವರಿಕೆ.

-ಕರ್ನಾಟಕ ಭೂಸ್ವಾಧೀನ ಮತ್ತು ಪುನರ್ವಸತಿ ತಿದ್ದುಪಡಿ ಕಾಯ್ದೆಗೆ ಅನುಮೋದನೆ.

-ದೇವಿಕಾರಾಣಿ ರೋರಿಚ್‌ ಎಸ್ಟೇಟ್‌ನ ಹೆರಿಟೇಜ್‌ ಸೈಟ್‌ ಮತ್ತು ಕಲಾಕೃತಿಗಳ ಸಂರಕ್ಷಣೆಗೆ ಕ್ರಮ.

-ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ನಿಯಮಾವಳಿಗೆ ಅನುಮೋದನೆ.

-ಕೆಎಎಸ್‌ ಅಧಿಕಾರಿ ಎಂ.ಪಿ.ರಂಜಿತಾ ವಿರುದ್ಧ ಇಲಾಖಾ ತನಿಖೆ ನಡೆಸುವ ಉಪಲೋಕಾಯುಕ್ತರ ಶಿಫಾರಸ್ಸು ತಿರಸ್ಕಾರ.

-ಕಬ್ಬನ್‌ ಪಾರ್ಕ್‌ನಲ್ಲಿರುವ ಪ್ರಸ್‌ಕ್ಲಬ್‌ ಕಟ್ಟಡದ ಗುತ್ತಿಗೆ ಅವಧಿ ಮುಂದುವರಿಕೆ.

-ಮಾಗಡಿ ರಸ್ತೆಯಲ್ಲಿ113 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರೋಗ್ಯ ಭವನ ನಿರ್ಮಾಣಕ್ಕೆ ಅನುಮತಿ.

-ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೇಡರ್‌ ಮತ್ತು ನೇಮಕಾತಿ) ನಿಯಮಾವಳಿಗೆ ಅನುಮೋದನೆ.

-ವಜಾಗೊಂಡಿದ್ದ ಸಹಾಯಕ ತೋಟಗಾರಿಕಾ ಅಧಿಕಾರಿ ಎಲ್.ಎಸ್‌.ಕಾಂಳ್ಳೆ ಮರು ನೇಮಕಕ್ಕೆ ಒಪ್ಪಿಗೆ.

-ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆ (ಕೇಡರ್‌ ಮತ್ತು ನೇಮಕಾತಿ)ನಿಯಮಾವಳಿಗೆ ಒಪ್ಪಿಗೆ.

-ಚಿತ್ರದುರ್ಗ ಜಿಲ್ಲೆಯ 346 ಹಾಗೂ ಚಿಕ್ಕಮಗಳೂರು ಜಿಲ್ಲೆಯ 113 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆಗೆ ಸಮ್ಮತಿ.

-ಕರ್ನಾಟಕ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ 59.54 ಕೋಟಿ ರೂ.ಅಂದಾಜು ವೆಚ್ಚದಲ್ಲಿ ಸಮವಸ್ತ್ರ ಮತ್ತು ಶುಚಿ ಸಂಭ್ರಮ ಕಿಟ್‌, 44.41 ಕೋಟಿ ರೂ.ವೆಚ್ಚದಲ್ಲಿ ನೋಟ್‌ ಬುಕ್‌, ಶೂಸ್‌, ಸಾಕ್ಸ್‌, ಟೈ, ಬೆಲ್ಟ್ ವಿತರಣೆಗೆ ಅನುಮತಿ.

-ಪದವಿಪೂರ್ವ ಮತ್ತು ಪ್ರೌಢಶಾಲಾ ಹಂತದ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು 70.19 ಕೋಟಿ ರೂ. ಬಿಡುಗಡೆಗೆ ಸಮ್ಮತಿ.

-ಅಂಗನವಾಡಿಗಳಿಗೆ 32.95 ಕೋಟಿ ರೂ.ವೆಚ್ಚದಲ್ಲಿ ಐಸಿಡಿಎಸ್‌ ಯೋಜನೆಯಡಿ ಶಾಲಾಪೂರ್ವ ಶೈಕ್ಷಣಿಕ ಪರಿಕರ ಕಿಟ್‌ ಖರೀದಿಗೆ ಒಪ್ಪಿಗೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.