“ಮಿಣಿ ಮಿಣಿ’ಗೆ ಮಧ್ಯಂತರ ತಡೆ
Team Udayavani, Feb 2, 2020, 3:04 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಭಾವಚಿತ್ರ ಅಥವಾ ಅವರ ಹೆಸರಿನ ಜೊತೆಗೆ “ಮಿಣಿ ಮಿಣಿ’ ಶಬ್ದ ಬಳಸಿ ಯಾವುದೇ ಮಾಧ್ಯಮ ಗಳಲ್ಲಿ ಪ್ರಸಾರ ಹಾಗೂ ಅಪಹಾಸ್ಯ ಮಾಡದಂತೆ ನಗರ ಸಿವಿಲ್ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ.
ಈ ವಿಚಾರವಾಗಿ ಎಲ್ಲಾ ದೃಶ್ಯ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಸಿವಿಲ್ ದಾವೆಯ ವಿಚಾರಣೆ ನಡೆಸಿದ ನಗರದ 20ನೇ ಕೋರ್ಟ್ನ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಶನಿವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲ ಶೇಕ್ ಜಬಿವುಲ್ಲಾ ವಾದ ಮಂಡಿಸಿ, ತಮ್ಮ ಕಕ್ಷಿದಾರರ ಭಾವಚಿತ್ರ ಹಾಗೂ ಹೆಸರಿನ ಜೊತೆಗೆ ಮಿಣಿ ಮಿಣಿ ಪದ ಬಳಕೆ ಮಾಡುವ ಮೂಲಕ ಅವರ (ಕುಮಾರಸ್ವಾಮಿ) ಗೌರವಕ್ಕೆ ಧಕ್ಕೆ ತರಲಾ ಗುತ್ತಿದೆ. ಆದ್ದರಿಂದ ಅದಕ್ಕೆ ತಡೆ ನೀಡಬೇಕು ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಪತ್ರಿಕೆ, ಟಿ.ವಿ ಚಾನೆಲ್, ಸಾಮಾಜಿಕ ಜಾಲತಾಣ ಸೇರಿ ಯಾವುದೇ ಮಾಧ್ಯಮಗಳಲ್ಲಿ ಮಿಣಿ ಮಿಣಿ ಪದವನ್ನು ಕುಮಾರಸ್ವಾಮಿ ಚಿತ್ರ ಅಥವಾ ವಿಡಿಯೋದೊಂದಿಗೆ ಸೇರಿಸಿ ಪ್ರಕಟಣೆ ಅಥವಾ ಪ್ರಸಾರ ಮಾಡಬಾರದು, ವಿಡಿಯೋ ಅಪ್ಲೋಡ್ ಮಾಡಬಾರದು ಎಂದು ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?