ಒಳ ಮೀಸಲು: 31ಕ್ಕೆ ಸಿಎಂ ಜತೆ ನಾಯಕರ ಸಭೆ
Team Udayavani, Dec 13, 2017, 9:08 AM IST
ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿದಂತೆ ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಡಿ.31ರಂದು ಎಡಗೈ ಹಾಗೂ ಬಲಗೈ ನಾಯಕರ ಸಭೆ ಕರೆದಿದ್ದಾರೆ. ಈ ಮೂಲಕ ಎರಡೂ ಸಮುದಾಯದ ನಾಯಕರ ಜತೆ ಸಮಾಲೋಚನೆ ನಡೆಸಿ ಒಮ್ಮತದ ಅಭಿಪ್ರಾಯದೊಂದಿಗೆ ಸದಾಶಿವ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ.
ಅಂದಿನ ಸಭೆಗೆ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಆರ್.ಬಿ.ತಿಮ್ಮಾಪುರ್, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವರಾದ ಬೋವಿ ಸಮುದಾಯದ ಶಿವರಾಜ್ ತಂಗಡಗಿ,
ಲಂಬಾಣಿ ಸಮುದಾಯದ ರುದ್ರಪ್ಪ ಲಮಾಣಿ ಅವರಿಗೆ ಆಹ್ವಾನ ನೀಡಲಾಗಿದೆ.
ಮಂಗಳವಾರ ಈ ಸಂಬಂಧ ತಮ್ಮನ್ನು ಭೇಟಿಯಾಗಿದ್ದ ಕೆ.ಎಚ್.ಮುನಿಯಪ್ಪ, ಎಚ್ .ಸಿ.ಮಹದೇವಪ್ಪ, ಆಂಜನೇಯ, ತಿಮ್ಮಾಪುರ್
ನಿಯೋಗಕ್ಕೂ, ಡಿ.31ರ ಸಭೆಯಲ್ಲಿ ಎಲ್ಲವನ್ನೂ ಸಮಗ್ರವಾಗಿ ಚರ್ಚಿಸೋಣ. ಎಲ್ಲರ ಒಪ್ಪಿಗೆಯಿಂದಲೇ ಜಾರಿಗೆ ಕ್ರಮ ಕೈಗೊಳ್ಳೋಣ.
ಯಾರೂ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಸೂಚಿಸಿದರು ಎನ್ನಲಾಗಿದೆ. ಸೋಮವಾರ ಸದಾಶಿವ ಆಯೊಗದ ವರದಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸಿದ ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳ ಜತೆಯೂ ಸಿದ್ದರಾಮಯ್ಯ ಮಂಗಳವಾರ ಸಮಾಲೋಚನೆ ನಡೆಸಿದರು.
ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಂಗಳವಾರ ಬೆಳಗ್ಗೆ ದಿಢೀರ್ ಸಚಿವ ಆಂಜನೇಯ ನಿವಾಸಕ್ಕೆ ಆಗಮಿಸಿ ಉಪಾಹಾರ ಸೇವಿಸಿ ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದರು. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಹೇಳಲಾಗಿದೆ. ಆದರೆ, ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹಾಗೂ ಆಂಜನೇಯ ಇಬ್ಬರೂ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್