ಕೆಎಸ್ಆರ್ಟಿಸಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
Team Udayavani, Aug 20, 2019, 3:02 AM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ “ಅಂಬಾರಿ ಡ್ರೀಮ್ ಕ್ಲಾಸ್- ಕನಸಿನೊಂದಿಗೆ ಪ್ರಯಾಣಿಸಿ’ ಎಂಬ ಬ್ರಾಂಡಿಂಗ್ಗೆ “ಸಿಎಂಒ ಏಷ್ಯಾ ಬ್ರಾಂಡ್ ಎಕ್ಸಲೆನ್ಸ್ ಅವಾರ್ಡ್’ ಅಂತಾರಾಷ್ಟ್ರೀಯ ಪ್ರಶಸ್ತಿ ದೊರಕಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾದ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೋಮವಾರ ಮಾಹಿತಿ ನೀಡಿದರು.
ಜತೆಗೆ ಅಂಬಾರಿ ಡ್ರೀಮ್ ಕ್ಲಾಸ್ ಬಸ್ನ ಸಮಗ್ರ ಮಾಹಿತಿಯುಳ್ಳ ಕೈಪಿಡಿಯೊಂದಿಗೆ ಬಸ್ನ ಸೇವೆ ಹಾಗೂ ವಿಶಿಷ್ಟತೆಯನ್ನು ವಿವರಿಸಿದರು. ನಿಗಮವು ಪ್ರಶಸ್ತಿಗೆ ಭಾಜನವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಯಡಿಯೂರಪ್ಪ, ಸಮಸ್ತ ಸಾರಿಗೆ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಗುವುದು. ಸಂಸ್ಥೆಯು ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆ ಕಲ್ಪಿಸಲಿ ಎಂದು ಆಶಿಸಿದರು.