Police ಕಾನ್ಸ್ಟೆಬಲ್ಗಳಿಗೆ ಜಿಲ್ಲೆಯೊಳಗೆ ವರ್ಗಾವಣೆ?
Team Udayavani, Feb 27, 2024, 12:24 AM IST
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಕಾನ್ಸ್ಟೆಬಲ್ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಜಿಲ್ಲೆಯೊಳಗೆ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ಗೆ ಸೂಚಿಸಿದ್ದಾರೆ.
ಬೆಂಗಳೂರು ಸಹಿತ ರಾಜ್ಯದ ಪೊಲೀಸ್ ಕಾನ್ಸ್ಟೆಬಲ್ಗಳ ಪತಿ-ಪತ್ನಿ ಪ್ರರಕಣಗಳಲ್ಲಿ ಜಿಲ್ಲೆಯೊಳಗೆ ವರ್ಗಾವಣೆ ಕುರಿತು ಪದೇ ಪದೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮೊದಲು ಅರ್ಹ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಸೂಚಿಸಿದ್ದಾರೆ.
ಜಿಲ್ಲೆಯೊಳಗೆ ವರ್ಗಾವಣೆ ಸಂಬಂಧ ಇತ್ತೀಚೆಗೆ ನೊಂದ ಪೊಲೀಸರ ಹೆಸರಿನಲ್ಲಿ ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಬರೆದಿದ್ದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬೆನ್ನಿಗೇ ಸಚಿವರಿಂದ ಈ ಸೂಚನೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ