ನೋಟು ಅಮಾನ್ಯದ ಬಳಿಕ ದಾಖಲೆ ಕರ ಸಂಗ್ರಹ


Team Udayavani, Feb 3, 2017, 3:45 AM IST

02-ST-1.jpg

ಬೆಂಗಳೂರು: ನೋಟು ಅಮಾನ್ಯದ ನಡುವೆಯೂ ಡಿಸೆಂಬರ್‌ ಅಂತ್ಯದ ವೇಳೆಗೆ ತೆರಿಗೆ ಸಂಗ್ರಹದಲ್ಲಿ ರಾಜ್ಯ ಸರ್ಕಾರ ಉತ್ತಮ
ಸಾಧನೆ ತೋರಿಸಿದ್ದು, ಬಜೆಟ್‌ ಗುರಿಯ ಶೇ. 71.8ರಷ್ಟು ಸಾಧನೆಯಾಗಿದೆ. 2013ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಈವರೆಗೆ
ಸಂಗ್ರಹವಾಗಿರುವ ಅತ್ಯಧಿಕ ಪ್ರಮಾಣದ ತೆರಿಗೆ ಇದಾಗಿದೆ.

ಇದರೊಂದಿಗೆ ನೋಟುಗಳ ಅಮಾನ್ಯ ದಿಂದಾಗಿ ತೆರಿಗೆ ಸಂಗ್ರಹದಲ್ಲಿ ಇಳಿಕೆಯಾಗಲಿದೆ ಎಂಬ ಆತಂಕ ದೂರವಾಗಿದ್ದು, ಮುದ್ರಾಂಕ
ಮತ್ತು ನೋಂದಣಿ ಶುಲ್ಕ ಹೊರತುಪಡಿಸಿ ಉಳಿದಂತೆ ವಾಣಿಜ್ಯ ತೆರಿಗೆ, ಅಬಕಾರಿ ಮತ್ತು ಸಾರಿಗೆ ಇಲಾಖೆ ತೆರಿಗೆ ಸಂಗ್ರಹದಲ್ಲಿ ಶೇ.70ಕ್ಕೂ ಹೆಚ್ಚು ಸಾಧನೆ ಮಾಡಿದೆ.

2016-17ನೇ ಸಾಲಿನಲ್ಲಿ ಡಿಸೆಂಬರ್‌ ಅಂತ್ಯದವರೆಗೆ ಬಜೆಟ್‌ ಗುರಿಯ ಶೇ. 71.8ರಷ್ಟು ಸಾಧನೆಯಾಗಿದೆ. 2011-12 ಮತ್ತು
2012-13ರ ನಂತರ ಇಷ್ಟು ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿರುವುದು ಇದೇ ಮೊದಲು. ಜನವರಿಯಿಂದ ತೆರಿಗೆ ಸಂಗ್ರಹದಲ್ಲಿ ಇನ್ನಷ್ಟು ಸುಧಾರಣೆ ಕಂಡುಬಂದಿದ್ದು, ಬಜೆಟ್‌ ಗುರಿಯ ಶೇ. 80ಕ್ಕಿಂತ ಹೆಚ್ಚು ಸಾಧನೆ ಮಾಡಲಾಗಿದೆ. ವರ್ಷಾಂತ್ಯದ ಫೆಬ್ರವರಿ ಮತ್ತು ಮಾಚ್‌ ìನಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ಈ ಆರ್ಥಿಕ ವರ್ಷಾಂತ್ಯದ ವೇಳೆ ಗುರಿ ಮೀರಿದ ತೆರಿಗೆ ಸಂಗ್ರಹವಾಗಬಹುದು ಎನ್ನುತ್ತಾರೆ ಹಣಕಾಸು ಇಲಾಖೆ ಅಧಿಕಾರಿಗಳು. 

ತೆರಿಗೆ ಸಂಗ್ರಹ ಎಷ್ಟು?: ರಾಜ್ಯದ ಸ್ವಂತ ತೆರಿಗೆ ರಾಜಸ್ವಕ್ಕೆ ಸಂಬಂಧಿಸಿದಂತೆ ಬಜೆಟ್‌ ಗುರಿಯ 83,864 ಕೋಟಿ ರೂ. ಪೈಕಿ ಡಿಸೆಂಬರ್‌ ಅಂತ್ಯಕ್ಕೆ 60,210 ಕೋಟಿ ರೂ. (ಶೇ. 71.8) ಕೋಟಿ ರೂ. ಸಂಗ್ರಹವಾಗಿದೆ. ಅದರಲ್ಲಿ ವಾಣಿಜ್ಯ ತೆರಿಗೆಯಿಂದ 37,341 ಕೋಟಿ ರೂ. (ಶೇ. 72.7), ಅಬಕಾರಿ ತೆರಿಗೆಯಿಂದ 12,191 ಕೋಟಿ ರೂ. (ಶೇ. 73.8), ಮೋಟಾರು ವಾಹನ ತೆರಿಗೆಯಿಂದ 3,859 ಕೋಟಿ ರೂ. (ಶೇ. 74.8), ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ 5,904 (ಶೇ. 64.9), ಇತರೆ ತೆರಿಗೆ
ಮೂಲಗಳಿಂದ 915 ಕೋಟಿ ರೂ. (ಶೇ. 52.1) ಬಂದಿದೆ. ಅದೇ ರೀತಿ ಸ್ವಂತ ತೆರಿಗೆಯೇತರ ರಾಜಸ್ವದಡಿ 3,960 ಕೋಟಿ ರೂ. (ಶೇ. 63.7) ಸಂಗ್ರಹವಾಗಿದೆ.

ನೋಟು ಅಮಾನ್ಯದಿಂದ ಸಮಸ್ಯೆಯಾಗಿದ್ದು ಮುದ್ರಾಂಕ ಮತ್ತು ನೋಂದಣಿ ಶುಲ್ಕದಲ್ಲಿ ಮಾತ್ರ. 2015-16ರಲ್ಲಿ ಡಿಸೆಂಬರ್‌ ಅಂತ್ಯಕ್ಕೆ ಬಜೆಟ್‌ ಗುರಿಯ ಶೇ. 71.7 ಕೋಟಿ ರೂ. ಸಂಗ್ರಹವಾಗಿದ್ದರೆ, ಈ ಬಾರಿ 64.9ರಷ್ಟು ಮಾತ್ರ ಆಗಿದೆ. ಉಳಿದೆಲ್ಲಾ ವಿಭಾಗಗಳ ತೆರಿಗೆ ಸಂಗ್ರಹ ಬೆಳವಣಿಗೆ ಪ್ರಮಾಣ ಶೇ. 8.6ರಿಂದ ಶೇ. 13.8ರವರೆಗೆ ಹೆಚ್ಚಾಗಿದ್ದರೆ, ಮುದ್ರಾಂಕ, ನೋಂದಣಿ ಶುಲ್ಕದಲ್ಲಿ ಶೇ. 0.4ರಷ್ಟು ಏರಿಕೆ ಕಂಡುಬಂದಿದೆ.

ಕೇಂದ್ರದ ಅನುದಾನವೂ ಹೆಚ್ಚಳ
ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುವ ಸಹಾಯಧನ ಕಡಿತಗೊಳಿಸಿ ತೆರಿಗೆ ಪ್ರಮಾಣ ಹೆಚ್ಚಿಸಿದ ಬಳಿಕ ರಾಜ್ಯಕ್ಕೆ ಬರುವ ಅನುದಾನ ಪ್ರಮಾಣವೂ ಹೆಚ್ಚಳವಾಗಿದೆ. 2016-17ನೇ ಸಾಲಿನಲ್ಲಿ ಡಿಸೆಂಬರ್‌ ಅಂತ್ಯದವರೆಗೆ ಕೇಂದ್ರದಿಂದ ಬಂದಿರುವ ಮೊತ್ತ ಇದುವರೆಗಿನ ಸಾರ್ವಕಾಲಿಕ ದಾಖಲೆ.2016-17ನೇ ಸಾಲಿನ ತೆರಿಗೆ ಹಂಚಿಕೆಯಲ್ಲಿ ವಾರ್ಷಿಕ ಗುರಿಯ ಶೇ. 67.7ರಷ್ಟು ಡಿಸೆಂಬರ್‌ ಅಂತ್ಯಕ್ಕೆ ಹಂಚಿಕೆಯಾಗಿದೆ. 2012-13ನೇ ಸಾಲಿನಿಂದ 2015-16ನೇ ಸಾಲಿನವರೆಗೆ ಈ ಪ್ರಮಾಣ ಶೇ. 64ರಿಂದ 64.6 ಮಧ್ಯೆ ಇತ್ತು. ಅದೇ ರೀತಿ ಸಹಾಯಧನ ಹಂಚಿಕೆಯಲ್ಲೂ ಉತ್ತಮ ಸಾಧನೆಯಾಗಿದೆ. 2016-17ನೇ ಸಾಲಿನಲ್ಲಿ ಡಿಸೆಂಬರ್‌ ಅಂತ್ಯಕ್ಕೆ 
ಒಟ್ಟಾರೆ ವಾರ್ಷಿಕ ಗುರಿಯ ಶೇ. 80.1ರಷ್ಟು ಮೊತ್ತ ಕೇಂದ್ರದಿಂದ ರಾಜ್ಯಕ್ಕೆ ಪಾವತಿಯಾಗಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.