ಇನ್ವೆಸ್ಟ್ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ
Team Udayavani, Oct 22, 2021, 7:33 AM IST
ಬೆಂಗಳೂರು: ಮುಂದಿನ ವರ್ಷದ ನವೆಂಬರ್ನಲ್ಲಿ “ಇನ್ವೆಸ್ಟ್ ಕರ್ನಾಟಕ’ ಸಮಾವೇಶ ನಡೆಯಲಿದ್ದು, ಹತ್ತು ಲಕ್ಷ ಕೋ.ರೂ. ಬಂಡವಾಳ ಹೂಡಿಕೆ ಆಗುವ ನಿರೀಕ್ಷೆ ಇದೆ. ಈ ಗುರಿ ಸಾಧನೆಗೆ ದುಬಾೖ ಎಕ್ಸ್ಪೋ ಸಹಕಾರಿ ಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.
“ದುಬಾೖ ಎಕ್ಸ್ಪೋ-2020’ದಲ್ಲಿ 3 ದಿನಗಳ ಕಾರ್ಯಕ್ರಮ ಯಶಸ್ವಿ ಯಾಗಿದೆ. 190ಕ್ಕೂ ಅಧಿಕ ದೇಶಗಳು ಪಾಲ್ಗೊಂಡಿದ್ದವು. ಅಂದಾಜು 45 ಲಕ್ಷ ಮಂದಿ ಎಕ್ಸ್ಪೋಗೆ ಭೇಟಿ ನೀಡಲಿದ್ದಾರೆ. ಎಕ್ಸ್ಪೋದಲ್ಲಿ ದುಬಾೖ ಇಸ್ಲಾಮಿಕ್ ಇನ್ವೆಸ್ಟರ್ಸ್ ಜತೆ ಒಪ್ಪಂದ ಮಾಡಿ ಕೊಳ್ಳಲಾಗಿದೆ. ಅದು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದ್ದು, ಮುಂದಿನ 3 ವರ್ಷಗಳಲ್ಲಿ 3,500 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ಪ್ರದರ್ಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಚಿವರು ಹೇಳಿದರು.
ಅ. 17ರಂದು ನಡೆದ ಉದ್ಯಮಿಗಳ ಚರ್ಚೆಯಲ್ಲಿ 180ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. “ಕರ್ನಾಟಕ- ನೌ ಬಿಯಾಂಡ್’ ಕಾರ್ಯಕ್ರಮದ ಮೂಲಕ ಕೊಲ್ಲಿ ಸಹಿತ ವಿಶ್ವದ 200ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೋದ್ಯಮಿಗಳಿಗೆ ಕರ್ನಾಟಕವು ಹೂಡಿಕೆಗೆ ಪ್ರಶಸ್ತ ಸ್ಥಳ ಎಂದು ಮನದಟ್ಟು ಮಾಡಲಾಗಿದೆ. ರಾಜ್ಯದ ಸಂಸ್ಕೃತಿಯನ್ನೂ ಅನಾವರಣ ಮಾಡಲಾಗಿದೆ ಎಂದರು.
ಐದು ಕಡೆ ಅದಾಲತ್: ಈಚೆಗೆ ನಡೆದ “ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರ ಯಶಸ್ವಿಯಾಗಿದ್ದು, ಕೈಗಾರಿಕಾ ಅದಾಲತ್ ಕೂಡ ಫಲ ನೀಡಿದೆ. ನ. 11 ಮತ್ತು 12ರಂದು ಕಲಬುರಗಿಯಲ್ಲಿ ಕೈಗಾರಿಕಾ ಅದಾಲತ್ ಹಮ್ಮಿಕೊಳ್ಳಲಾಗಿದೆ. ಬಳಿಕ ಬೆಳಗಾವಿ, ಕರಾವಳಿ ಸೇರಿದಂತೆ ಐದು ಕಡೆ ಆಯೋಜಿ ಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ