ಭರತ್‌ ಶೆಟ್ಟಿ ಮೇಲೆ ಎಫ್ಐಆರ್‌ ಬಗ್ಗೆ ತನಿಖೆ: ಗೃಹ ಸಚಿವ ಪರಮೇಶ್ವರ್‌


Team Udayavani, Feb 16, 2024, 12:28 AM IST

Parameshwar

ಬೆಂಗಳೂರು: ಮಂಗ ಳೂರು ಉತ್ತರದ ಶಾಸಕ ಭರತ್‌ ಶೆಟ್ಟಿ ಅವರು ಜೆರೋಸಾ ಶಾಲೆಯ ವಠಾರದಲ್ಲಿ ಇಲ್ಲದಿದ್ದರೂ ಅವರ ಮೇಲೆ ಎಫ್ಐಆರ್‌ ಹಾಕಿರುವುದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಆದರೆ ಇಷ್ಟಕ್ಕೇ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು, ಎಫ್ಐಆರ್‌ ದಾಖಲಿಸಿದ ಎಸ್‌ಐ ಅನ್ನು ತತ್‌ಕ್ಷಣವೇ ಅಮಾನತು ಮಾಡಬೇಕು ಮತ್ತು ಶಾಲೆಯ ವಿರುದ್ದ ಪೋಷಕರು ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು. ಇದು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಎಡೆ ಮಾಡಿಕೊಟ್ಟ ಕಾರಣ ಸದನವನ್ನು ಮುಂದೂಡಲಾಯಿತು.

ತಾನು ಸ್ಥಳದಲ್ಲಿಲ್ಲದಿದ್ದರೂ ಅನಿಲ್‌ ಲೋಬೋ ನೀಡಿದ ದೂರಿನ ಆಧಾರ ದಲ್ಲಿ ನನ್ನ ಮೇಲೆ ದೂರು ದಾಖಲಾಗಿದೆ ಎಂದು ಭರತ್‌ ಶೆಟ್ಟಿ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾವಿಸಿದರು. ಇದಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಗೃಹ ಸಚಿವರು, ಭರತ್‌ ಶೆಟ್ಟಿ ಶಾಲೆಯ ಬಳಿಗೆ ಹೋಗಿಲ್ಲ. ನಾನು ಇದರ ಬಗ್ಗೆ ಪರಿಶೀಲಿಸಿಕೊಂಡಿದ್ದೇನೆ. ಡಿಡಿಪಿಐ ಕಚೇರಿಗೆ ಹೋಗಿ ಹಿಂದೂ ಮಕ್ಕಳನ್ನು ಕ್ರಿಶ್ಚಿಯನ್‌ ಶಾಲೆಗೆ ಸೇರಿಸಬೇಡಿ ಅಂತ ಹೇಳಿಕೆ ಕೊಟ್ಟಿ¨ªಾರೆ. ಇದು ಪ್ರಚೋದನಕಾರಿ ಹೇಳಿಕೆ ಅಂತ ದೂರಿನಲ್ಲಿ ಸೇರಿಸಿದ್ದಾರೆ ಎಂದರು.

ಆದರೆ ಸುನಿಲ್‌ ಕುಮಾರ್‌ ಮತ್ತು ಆರ್‌. ಅಶೋಕ್‌ ಅವರು, ಪ್ರಕರಣಕ್ಕೆ ಸಂಬಂಧಿಸಿ ಎರಡು ದೂರುಗಳು ಸಲ್ಲಿಕೆಯಾಗಿದ್ದರೂ ಒಂದು ಮಾತ್ರ ಎಫ್‌ಐಆರ್‌ ಆಗಿದೆ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಇನ್ನೊಂದು ನ್ಯಾಯ ಮಾಡಲಾಗಿದೆ. ಸ್ಥಳದಲ್ಲಿಲ್ಲದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಿ ಕರ್ತವ್ಯಲೋಪ ಎಸಗಿದ ಪೊಲೀಸ್‌ ಅಧಿಕಾರಿಯನ್ನು ಅಮಾ ನತು ಮಾಡಬೇಕು ಎಂದರು.

ಬಸವರಾಜ ಬೊಮ್ಮಾಯಿ, ಶಾಲೆ ಯವರು ಶಿಕ್ಷಕಿಯನ್ನು ಅಮಾನತು ಮಾಡಿ ನ್ಯಾಯಬದ್ಧ ಕ್ರಮ ಕೈಗೊಂಡಿ ದ್ದಾರೆ. ಆದರೆ ಸರಕಾರವೇ ಕ್ಲೀನ್‌ಚಿಟ್‌ ಕೊಡುತ್ತಿದೆ ಎಂದು ಟೀಕಿಸಿದರು.

ಪ್ರಾಥಮಿಕ ತನಿಖೆ ವೇಳೆ ಶಿಕ್ಷಕಿಯ ತಪ್ಪಿಲ್ಲ ಎಂಬುದು ಗೊತ್ತಾಗಿದೆ ಅದನ್ನು ಸದನಕ್ಕೆ ತಿಳಿಸಿದ್ದೇನೆ. ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು. ಒಂದು ವೇಳೆ ಅಧಿಕಾರಿ ತಪ್ಪು ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು. ಜತೆಗೆ, ಶಾಸಕ ಭರತ್‌ ಶೆಟ್ಟಿ ಸಾಮಾ ಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್‌ ಶಾಲೆಗಳಿಗೆ ಮಕ್ಕಳನ್ನು ಸೇರಿಸಬಾರದು ಎಂಬಂತೆ ಪೋಸ್ಟ್‌ ಮಾಡಿದ್ದನ್ನು ಓದಿ, ಹೀಗಿದ್ದಾಗ್ಯೂ ಎಫ್‌ಐಆರ್‌ ಮಾಡುವುದು ತಪ್ಪೇ ಎಂದು ಪ್ರಶ್ನಿಸಿದರು. ಅದರಲ್ಲಿ ಏನು ತಪ್ಪಿದೆ ಎಂದು ಭರತ್‌ ಶೆಟ್ಟಿ ಪ್ರಶ್ನಿಸಿದರು.

ಯಾಕೆ ಕೂಗಾಡುತ್ತೀರಿ, ಕೋಪ ನಿಮಗೆ ಮಾತ್ರ ಬರುತ್ತಾ? ಯಾರನ್ನು ಹೆದರಿಸುತ್ತೀರಿ, ಇದು ವಿಧಾನಸಭೆ; ಹೌದು, ಇದೇ ಸತ್ಯ. ನಾನು ನನ್ನ ಹೇಳಿಕೆಗೆ ಬದ್ಧನಿದ್ದೇನೆ ಎಂದು ಗೃಹಸಚಿವರು ಏರುಧ್ವನಿಯಲ್ಲಿ ಹೇಳಿದರು. ಆಡಳಿತ ಪಕ್ಷದ ಸದಸ್ಯರು ಗೃಹಸಚಿವರ ಬೆಂಬಲಕ್ಕೆ ನಿಂತರು. ಕೆಲಕಾಲ ಸದನದಲ್ಲಿ ಏನಾಗುತ್ತಿದೆ ಎಂಬುದೇ ಗೊತ್ತಾಗಲಿಲ್ಲ. ಕೊನೆಗೆ ವಿಧಾನಸಭಾಧ್ಯಕ್ಷರು ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.