COVID ಅಕ್ರಮಗಳ ತನಿಖೆ ಸೇಡಲ್ಲ, ನ್ಯಾಯ ಸಿಗಬೇಕು ಅಷ್ಟೇ..: ಡಿಸಿಎಂ ಡಿ.ಕೆ.ಶಿವಕುಮಾರ್
Team Udayavani, Aug 28, 2023, 3:17 PM IST
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ತನಿಖೆ ನಡೆಸುತ್ತಿರುವುದು ಸೇಡಿನ ರಾಜಕಾರಣ ಅಲ್ಲವೆಂದು ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಸೇಡಿನ ರಾಜಕಾರಣ ಮಾಡಲು ಬಯಸುವುದಿಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ನಾವು ಬಯಸುತ್ತೇವೆ ಎಂದರು.
ಆಮ್ಲಜನಕ ಸರಬರಾಜು ಕೊರತೆಯಿಂದಾಗಿ 36 ಜನರು ಸಾವನ್ನಪ್ಪಿದ್ದಾರೆ. ಆದರೆ ಮೂವರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಆಗಿನ ಆರೋಗ್ಯ ಸಚಿವರು ಹೇಳಿದ್ದಾರೆ.ಆಗ ಒಬ್ಬ ಸಿಬಂದಿಯನ್ನೂ ಅಮಾನತು ಮಾಡಿಲ್ಲ. ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ…ಈಗ ನಾವು ತನಿಖೆ ಮಾಡಬೇಕಲ್ಲವೇ?” ಎಂದು ಪ್ರಶ್ನಿಸಿದರು.