ದಲಿತ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
Team Udayavani, Aug 14, 2019, 3:01 AM IST
ಬೆಂಗಳೂರು: ಕೋಲಾರದಲ್ಲಿ ಆ.17 ರಿಂದ ನಡೆಯಲಿರುವ “ರಾಜ್ಯಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ’ದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಮತ್ತು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಅವರಿಗೆ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು ಅಧಿಕೃತ ಆಹ್ವಾನ ನೀಡಿತು.
ನಗರದ ಅಂಬೇಡ್ಕರ್ ವೀದಿಯ ವಿಶ್ವೇಶ್ವರಯ್ಯ ಗೋಪುರದಲ್ಲಿರುವ ಡಾ.ಎಲ್.ಹನುಮಂತಯ್ಯ ಅವರ ಕಚೇರಿಗೆ ತೆರಳಿದ ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ನೇತೃತ್ವದ ನಿಯೋಗ ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಆಹ್ವಾನಿಸಿತು. ಕಸಾಪ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿ ಡಾ.ರಾಜಶೇಖರ ಹತಗುಂದಿ ಉಪಸ್ಥಿತರಿದ್ದರು.