ಐ ಫೋನ್‌: ಮೇಡ್‌ ಇನ್‌ ಕರ್ನಾಟಕ: ಒಂದು ಲಕ್ಷ ಉದ್ಯೋಗ; 5,727 ಕೋ.ರೂ. ಹೂಡಿಕೆ


Team Udayavani, Mar 4, 2023, 6:40 AM IST

ಐ ಫೋನ್‌: ಮೇಡ್‌ ಇನ್‌ ಕರ್ನಾಟಕ: ಒಂದು ಲಕ್ಷ ಉದ್ಯೋಗ; 5,727 ಕೋ.ರೂ. ಹೂಡಿಕೆ

ಬೆಂಗಳೂರು: ಆ್ಯಪಲ್‌ನ ಐ ಫೋನ್‌ ಇನ್ನು ರಾಜ್ಯದ ದೊಡ್ಡಬಳ್ಳಾಪುರದ ಕೆಐಎಡಿಬಿ ಪ್ರದೇಶದಲ್ಲಿ ಉತ್ಪಾದನೆಯಾಗಲಿದೆ. ಅದಕ್ಕಾಗಿ ಜಗತ್ತಿನ ಮುಂಚೂಣಿ ಕಂಪೆನಿಗಳಲ್ಲಿ ಒಂದಾಗಿರುವ ತೈವಾನ್‌ನ ಫಾಕ್ಸ್‌ಕಾನ್‌ ಕಂಪೆನಿ ಘಟಕ ಸ್ಥಾಪಿಸಲಿದೆ. ದೇವನಹಳ್ಳಿಯಲ್ಲಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಈ ಘಟಕ ಸ್ಥಾಪಿಸುವ ಸಾಧ್ಯತೆಗಳಿವೆ.

ಅದಕ್ಕಾಗಿ 300 ಎಕರೆ ಜಾಗ ಗುರುತಿಸಲಾಗಿದೆ. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ಫಾಕ್ಸ್‌ಕಾನ್‌ ಸಮೂಹದ ಸಿಇಒ ಮತ್ತು ಅಧ್ಯಕ್ಷ ಯಂಗ್‌ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗ ಸ್ಥಳ ವೀಕ್ಷಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಐ ಫೋನ್‌ “ಮೇಡ್‌ ಇನ್‌ ಕರ್ನಾಟಕ’ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಳ್ಳಲಿದೆ. ಅದಕ್ಕಾಗಿ ಕಂಪೆನಿ 5,727 ಕೋಟಿ ರೂ. ಹೂಡಿಕೆ ಮಾಡಲಿದೆ.

ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡ ಐಟಿ, ಬಿಟಿ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಅವರು ರಾಜ್ಯದಲ್ಲಿ ಐಟಿ, ತಾಂತ್ರಿಕ ಶಿಕ್ಷಣ, ಕೌಶಲಾಭಿವೃದ್ಧಿ, ನುರಿತ ಮಾನವ ಸಂಪನ್ಮೂಲ, ಉದ್ಯಮಗಳು ನೀಡುತ್ತಿರುವ ಸಹಭಾಗಿತ್ವ ಮತ್ತು ಇಲ್ಲಿರುವ ಅತ್ಯುತ್ತಮ ಕಾರ್ಯ ಪರಿಸರ ಕುರಿತು ಮನದಟ್ಟು ಮಾಡಿಕೊಟ್ಟರು. ಇದೇ ನಿಯೋಗ ಅನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.

ರಾಜ್ಯಕ್ಕೆ ಅವಕಾಶ
ಆ್ಯಪಲ್‌ ಮೊಬೈಲ್‌ ತಯಾರಿಕಾ ಸಂಸ್ಥೆ ಶೀಘ್ರದಲ್ಲೇ ಕರ್ನಾಟಕದಲ್ಲಿ ತಯಾರಿಕಾ ಘಟಕ ಸ್ಥಾಪನೆ ಮಾಡಲಿದೆ. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿ ಜತೆ ರಾಜ್ಯಕ್ಕೆ ಹಲವು ಅವಕಾಶ ಒದಗಿ ಬರಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತ ಟ್ವೀಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 2025ಕ್ಕೆ ಐದು ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಗುರಿ ಹೊಂದಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಪ್ರತಿಕ್ರಿಯೆ ನೀಡಿ, “ಆ್ಯಪಲ್‌ ಸಂಸ್ಥೆ 300 ಎಕರೆ ಪ್ರದೇಶದಲ್ಲಿ ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪನೆ ಮಾಡಲಿದೆ. ಇದು ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ನೇತೃತ್ವದ ಡಬಲ್‌ ಎಂಜಿನ್‌ ಸರಕಾರದ ಸಾಧನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.