ಫಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್ ಮೈತ್ರಿ ಖತಂ?
ಹಾಸನ ಪ್ರಕರಣದಿಂದ ಬಿಜೆಪಿಗೆ ಮುಜುಗರ; ವಿಧಾನ ಪರಿಷತ್ಗೆ ಏಕಾಂಗಿ ಸ್ಪರ್ಧೆ ಸಾಧ್ಯತೆ
Team Udayavani, May 9, 2024, 7:10 AM IST
ಬೆಂಗಳೂರು: ಅಶ್ಲೀಲ ಪೆನ್ಡ್ರೈವ್ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.
ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ ಹೇಳಿಕೆ ನೀಡಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುವುದು ರಾಜ್ಯ ಬಿಜೆಪಿ ನಾಯಕರಿಗೆ ಅನಿವಾರ್ಯವಾಗಲಿದೆ.
ಹಾಸನ ಪ್ರಕರಣದಲ್ಲಿ ಕೆಲವು ಬಿಜೆಪಿ ನಾಯಕರ ವರ್ತನೆ ಬಗ್ಗೆ ಜೆಡಿಎಸ್ ಆಕ್ಷೇಪ ಹೊಂದಿದೆ. ಈ ಪ್ರಕರಣದ ಕೇಂದ್ರ ಬಿಂದುಗಳ ಪೈಕಿ ಒಬ್ಬರಾದ ಪ್ರೀತಮ್ ಗೌಡ ಅವರ ಬಗ್ಗೆ ಬಿಜೆಪಿಯ ಕೆಲವು ಪ್ರಮುಖ ನಾಯಕರು ಮೃದು ಧೋರಣೆ ಹೊಂದಿರುವುದು ಕುಮಾರಸ್ವಾಮಿಗೆ ಇರಿಸುಮುರಿಸು ಉಂಟು ಮಾಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಆರ್.ಅಶೋಕ್ ಅವರು, ಪ್ರಜ್ವಲ್ ಗೆದ್ದರೆ ಎನ್ಡಿಎ ಕ್ರಮ ತೆಗೆದುಕೊಳ್ಳುತ್ತದೆ ಎಂದಿರುವುದು ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಹೀಗಾಗಿ ಅವರು ಮೈತ್ರಿ ತ್ಯಾಗದ ಪ್ರಶ್ನೆ ಎತ್ತಿದ್ದಾರೆ.
ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಎರಡು ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವುದು ಬಿಜೆಪಿಯ ರಾಜ್ಯ ನಾಯಕರಿಗೆ ಇಷ್ಟವಿಲ್ಲ. ಪ್ರಜ್ವಲ್ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಜತೆಗಿಟ್ಟುಕೊಂಡು ಮೇಲ್ಮನೆ ಚುನಾವಣೆಗೆ ಹೋದರೆ ಮುಜುಗರ ಎದುರಿಸಬೇಕಾಗುತ್ತದೆ ಎಂಬ ವಾದವೂ ಇದೆ. ಹೀಗಾಗಿ ಸುದೀರ್ಘ ಪ್ರಯಾಣದ ನಿರೀಕ್ಷೆ ಹುಟ್ಟು ಹಾಕಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಅವಧಿಪೂರ್ವ ಪ್ರಸವಕ್ಕೊಳಗಾಗುವ ಸಾಧ್ಯತೆಯ ಚರ್ಚೆ ಈಗ ತೀವ್ರಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ