ರೇವಣ್ಣಂಗೆ ಮೀಟರ್ ಇದೆಯಾ?: ಜಮೀರ್
Team Udayavani, Oct 9, 2017, 10:40 AM IST
ತುಮಕೂರು: “ತಾಕತ್ತಿದ್ದರೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಲಿ’ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಖಾನ್ ಸವಾಲು ಹಾಕಿದ್ದಾರೆ. ಅಲ್ಲದೆ, “ನನ್ನ ವಿರುದ್ಧ ಸ್ಪರ್ಧಿಸಲು ರೇವಣ್ಣಗೆ ಮೀಟರ್ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ನಾನು ಎಚ್.ಡಿ ರೇವಣ್ಣಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ. ರೇವಣ್ಣಗೆ ಮೀಟರ್ ಎನ್ನುವುದು ಇದ್ದರೆ, ನನ್ನ ವಿರುದ್ಧ ಸ್ಪರ್ಧಿಸಲಿ’ ಎಂದು ಎದೆ ತಟ್ಟಿಕೊಂಡು ಸವಾಲು ಹಾಕಿದರು. “ಆರ್.ವಿ.ದೇವರಾಜುಗೆ ಟೋಪಿ ಹಾಕಿದವನೆಂದು ನನ್ನ ವಿರುದ್ಧ ಆರೋಪ ಮಾಡಿದ್ದೀರಿ. ಆದರೆ, ನಾನು ಹಾಗೂ ದೇವರಾಜು ಆತ್ಮೀಯ ಸ್ನೇಹಿತರು. ನಾನು ಈವರೆಗೆ ಯಾರಿಗೂ ಟೋಪಿ ಹಾಕಿಲ್ಲ. ಆದರೆ, ರೇವಣ್ಣ ಅವರು ಸ್ವಂತ ತಮ್ಮ ಕುಮಾರಸ್ವಾಮಿಗೆ 2006ರಲ್ಲಿ ಟೋಪಿ ಹಾಕಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ರಚಿಸಲು ಅಡ್ಡಗಾಲು ಹಾಕಿದ್ದ ರೇವಣ್ಣ, ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿ ನೀನು ಮುಖ್ಯಮಂತ್ರಿಯಾದರೆ ದೇವೇಗೌಡರು ವಿಷ ಕುಡಿದುಸಾಯುತ್ತಾರೆ ಎಂದು ಬ್ಲಾಕ್ ಮೇಲ್ ಮಾಡಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದ್ದರು. ಬಳಿಕ, ದೇವೇಗೌಡರಿಗೇ ಟೋಪಿ ಹಾಕಿ ಮಂತ್ರಿಯಾದರು. ಸಿಬಿಐ ತನಿಖೆ ನಡೆಸಿದರೆ ನಿಮ್ಮ ಬಣ್ಣ ಬಯಲಾಗುತ್ತೆ’ ಎಂದು ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ