ಸಿಎಂ ದಿಲ್ಲಿಗೆ ಹೊರಟರೂ ಆಕಾಂಕ್ಷಿಗಳಿಗಿಲ್ಲ ಉತ್ಸಾಹ!: ಇದರ ಗುಟ್ಟೇನು?
ಆಕಾಂಕ್ಷಿಗಳು ಮೌನಕ್ಕೆ ಶರಣಾಗಲು ಇದೇ ಕಾರಣ?
Team Udayavani, May 10, 2022, 10:42 AM IST
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದಿಲ್ಲಿಗೆ ಪ್ರಯಾಣ ಬೆಳೆಸುತ್ತಿದ್ದರೂ, ಸಂಪುಟ ಸೇರ್ಪಡೆಯ ಆಕಾಂಕ್ಷಿಗಳಿಗೆ ಮಾತ್ರ ಈ ಬಾರಿ ಉತ್ಸಾಹವೇ ಇಲ್ಲ ಎಂಬಂತಾಗಿದೆ.
ಸಂಪುಟ ಪುನಾರ್ರಚನೆ ಹಾಗೂ ವಿಸ್ತರಣೆ ಎಂಬುದು ಬಿಜೆಪಿ ಶಾಸಕರ ಪಾಲಿಗೆ ” ನಾಳೆ ಬಾ” ಕತೆಯಂತೆ ಆಗಿದೆ. ಪ್ರತಿ ಬಾರಿ ಸಿಎಂ ದಿಲ್ಲಿಗೆ ತೆರಳುವಾಗಲೂ ಅವರ ಮನೆಗೆ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದ ಆಕಾಂಕ್ಷಿಗಳು ಈ ಬಾರಿ ಸುಳಿದಿಲ್ಲ. ಬೇರೆ ನಾಯಕರ ಮನೆಗೂ ಎಡತಾಕುತ್ತಿಲ್ಲ. ಬಹುತೇಕ ಆಕಾಂಕ್ಷಿಗಳು ಮೌನಕ್ಕೆ ಶರಣಾಗಿದ್ದು, ಕೊಟ್ಟರೆ ನೋಡೋಣ ಎಂಬ ಸ್ಥಿತಿಗೆ ತಲುಪಿದ್ದಾರೆ.
ಇದರ ಜತೆಗೆ ಬಿಜೆಪಿ ಸಂಘಟನಾ ಮನಸ್ಥಿತಿಗೆ ಬಂದು ತಲುಪಿದೆ. ಹಳೆ ಮೈಸೂರು ಭಾಗದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅನ್ಯ ಪಕ್ಷದ ನಾಯಕರನ್ನು ಪಕ್ಷಕ್ಕೆ ಕರೆತರಲಾಗುತ್ತಿದೆ. ಇದೆಲ್ಲವೂ ಪಕ್ಷ ಚುನಾವಣಾ ಸಿದ್ಧತೆಗೆ ಇಳಿಯುತ್ತಿರಯವುದರ ಸೂಚನೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು: 6 ಮಂದಿ ಗಂಭೀರ
ಹೀಗಾಗಿ ಈ ಹಂತದಲ್ಲಿ ಸಚಿವ ಸ್ಥಾನ ಪಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಇನ್ನು ಮೂರ್ನಾಲ್ಕು ತಿಂಗಳು ಕಳೆದ ನಂತರ ಪ್ರತಿಯೊಬ್ಬ ಶಾಸಕರೂ ತಮ್ಮ ಕ್ಷೇತ್ರಕ್ಕೆ ಮರಳುವುದು ಅನಿವಾರ್ಯವಾಗಲಿದೆ. ಇಲ್ಲವಾದರೆ ಕ್ಷೇತ್ರದಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ. ಈ ಹಂತದಲ್ಲಿ ಸಚಿವ ಸ್ಥಾನ ಪಡೆಯುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದು ಆಕಾಂಕ್ಷಿಗಳ ಅಭಿಪ್ರಾಯ. ಹೀಗಾಗಿ ಈ ಬಾರಿ ಸಿಎಂ ದಿಲ್ಲಿ ಭೇಟಿಗೆ ಹಿಂದಿನ ಮಹತ್ವ ಶಾಸಕರ ವಲಯದಿಂದ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ