“ಅಗ್ನಿಕುಲಕ್ಕೆ’ ಇಸ್ರೋದಿಂದ ರಾಕೆಟ್ ತಂತ್ರಜ್ಞಾನ!
ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನದ ಇತಿಹಾಸದಲ್ಲೇ ಮಹತ್ವಪೂರ್ಣ ಬೆಳವಣಿಗೆ
Team Udayavani, Nov 12, 2022, 7:30 AM IST
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಇತಿಹಾಸದಲ್ಲೇ ಮಹತ್ವಪೂರ್ಣ ಘಟನೆಯೊಂದು ಸಂಭವಿಸಿದೆ.
“ಅಗ್ನಿಕುಲ ಕಾಸ್ಮಾಸ್’ ಎಂಬ ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟಪ್ಗೆ ರಾಕೆಟ್ ವ್ಯವಸ್ಥೆಯೊಂದನ್ನು ಇಸ್ರೋ ಪೂರೈಸಿದೆ.
ಫ್ಲೈಟ್ ಟರ್ಮಿನೇಷನ್ ಸಿಸ್ಟಮ್ ಅಥವಾ ರಾಕೆಟ್ಗಳು ದಾರಿ ತಪ್ಪಿದಾಗ ಅವನ್ನು ನಾಶಪಡಿಸುವ ವ್ಯವಸ್ಥೆಯನ್ನು ನ.7ರಂದು “ಅಗ್ನಿಕುಲ’ಕ್ಕೆ ನೀಡಲಾಗಿದೆ. ಇದಕ್ಕೆ ಇನ್-ಸ್ಪೇಸ್ (ಇಂಡಿಯನ್ ನ್ಯಾಷನಲ್ ಸ್ಪೇಸ್ ಪ್ರಮೋಶನ್ ಆ್ಯಂಡ್ ಆಥರೈಸೇಶನ್ ಸೆಂಟರ್) ಸಂಸ್ಥೆಯ ಅಧಿಕೃತ ಸಮ್ಮತಿಯೂ ಬಿದ್ದಿದೆ.
ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಯಲ್ಲಿ ಈ ಬೆಳವಣಿಗೆ ನಡೆದಿದೆ.ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಂಶೋಧನೆ, ಪ್ರಯೋಗ ಮಾಡಲು ಖಾಸಗಿ ಸಂಸ್ಥೆಗಳಿಗೂ ಕೇಂದ್ರ ಸರ್ಕಾರ ಅವಕಾಶವನ್ನು ತೆರೆದಿದೆ. ಅದರ ಅಂಗವಾಗಿಯೇ ಅಗ್ನಿಕುಲ ಕಾಸ್ಮಾಸ್ ಎಂಬ ಸ್ಟಾರ್ಟಪ್ ಈ ಪ್ರಯೋಗ ಮಾಡಿದೆ. ಅಗ್ನಿಕುಲ “ಅಗ್ನಿಬಾಣ’ ಎಂಬ ಉಪಗ್ರಹ ಉಡಾವಣಾ ವಾಹನ (ರಾಕೆಟ್)ವನ್ನು ಸಿದ್ಧಪಡಿಸಿದೆ. ಇದು 2 ಹಂತದ, ಹೇಗೆ ಬೇಕಾದರೂ ಪರಿವರ್ತಿಸಬಹುದಾದ ರಾಕೆಟ್.
ಇದರಲ್ಲಿ ಇಸ್ರೋದ ರಾಕೆಟ್ ತಂತ್ರಜ್ಞಾನ ಮತ್ತು ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುತ್ತದೆ. ಈ ಬೆಳವಣಿಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿಯವರೂ ಧುಮಕಲು ಪ್ರೋತ್ಸಾಹ ನೀಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್