ಐಟಿ ದಾಳಿ: ಸಿಎಂ ಸಿದ್ದರಾಮಯ್ಯ – ಪರಮೇಶ್ವರ್ ಚರ್ಚೆ
Team Udayavani, Aug 4, 2017, 8:40 AM IST
ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಾ| ಜಿ.ಪರಮೇಶ್ವರ್ ಚರ್ಚೆ ನಡೆಸಿದ್ದಾರೆ.
ಗುರುವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿದ ಪರಮೇಶ್ವರ್ ಐಟಿ ದಾಳಿಯಿಂದ ಪಕ್ಷ ಹಾಗೂ ಸರಕಾರದ ಮೇಲಾದ ಪರಿಣಾಮ, ರಾಜ್ಯದಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಶಾಸಕರ ಜವಾಬ್ದಾರಿ ನೋಡಿಕೊಳ್ಳುವ ಕುರಿತು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.
ಐಟಿ ದಾಳಿಯಿಂದ ರೆಸಾರ್ಟ್ನಲ್ಲಿ ರುವ ಗುಜರಾತ್ ಶಾಸಕರು ಆತಂಕಕ್ಕೆ ಒಳಗಾಗಿದ್ದಾರೆ. ಅವರ ಉಸ್ತುವಾರಿ ನೋಡಿ
ಕೊಳ್ಳಲು ಬೇರೆ ಸಚಿವರಿಗೆ ವಹಿಸಿಕೊಡ ಬೇಕಾ ಅಥವಾ ಡಿ.ಕೆ. ಶಿವಕುಮಾರ್ ಸಹೋದರ ಸಂಸದ ಡಿ.ಕೆ. ಸುರೇಶ್ಗೆ ವಹಿಸಬೇಕೆನ್ನುವ ಕುರಿತು ಚರ್ಚಿಸಲಾ ಗಿದ್ದು, ಅಲ್ಲದೇ ಪಕ್ಷದ ಪರವಾಗಿ ತಾವೂ ಭೇಟಿ ನೀಡಿ ಶಾಸಕರಲ್ಲಿ ಧೈರ್ಯ ತುಂಬಲು ಪರಮೇಶ್ವರ್ ನಿರ್ಧರಿಸಿದ್ದರು. ಅದರಂತೆ ರೆಸಾರ್ಟ್ಗೆ ತೆರಳಿ ಶಾಸಕರನ್ನು ಭೇಟಿ ಮಾಡಿ, ಧೈರ್ಯ ತುಂಬಿದ್ದಾರೆ.
2018ರ ವಿಧಾನಸಭೆ ಚುನಾವಣೆ ಯನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಈ ರೀತಿಯ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಪ್ರತಿತಂತ್ರ ಹೂಡುವ ಕುರಿತಂತೆ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪಕ್ಷದ ಇತರ ನಾಯಕರು ಹಾಗೂ ಕೆಲವು ಸಚಿವರ ಮನೆಗಳ ಮೇಲೆಯೂ ಐಟಿ ದಾಳಿ ನಡೆಯುವ ಸಂಭವ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದ ಇರುವುದಲ್ಲದೆ, ಐಟಿ ದಾಳಿಗೆ ಪ್ರತಿಯಾಗಿ ಬಿಜೆಪಿ ನಾಯಕರ ಮೇಲೆ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸುವ ಕುರಿತಂತೆಯೂ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷ ಯಾವತ್ತೂ ಭ್ರಷ್ಟರ ಪರ ಇಲ್ಲ: ಪರಂ
ಮುಖ್ಯಮಂತ್ರಿ ಭೇಟಿ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗುಜರಾತ್ ಶಾಸಕರು ಆತಂಕಪಡುವ ಅಗತ್ಯವಿಲ್ಲ, ಅವರಿಗೆ ಆತಿಥ್ಯ ನೀಡುವ ಜವಾಬ್ದಾರಿ ನಮ್ಮದು. ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಶಕ್ತಿ ಏನು ಎಂದು ಬಿಜೆಪಿ ಯವರಿಗೆ ಗೊತ್ತಿದೆ. ಆದ್ದರಿಂದ ಅವರನ್ನು ಹಣಿಯುವ ಕೆಲಸ ಮಾಡುತ್ತಿದೆ. ಅವರ ಮನೆಯ ಮೇಲೆ ದಾಳಿ ನಡೆದ ಬಳಿಕ ಆಗಿರುವ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಯಾವತ್ತೂ ಭ್ರಷ್ಟರ ಪರ ಇಲ್ಲ. ಡಿ.ಕೆ. ಶಿವಕುಮಾರ್ ಅವರ ವ್ಯವಹಾರಗಳ ಮೇಲೆ ಕಣ್ಣಿಟ್ಟು ಈ ದಾಳಿ ನಡೆಸಿದ್ದರೆ, ನಮ್ಮದೇನೂ ತಕರಾರಿಲ್ಲ. ಆದರೆ, ಗುಜರಾತ್ ಶಾಸಕರು ಇಲ್ಲಿ ಬಂದಾಗ ದಾಳಿ ನಡೆಸಿರುವುದು ರಾಜ ಕೀಯ ಉದ್ದೇಶದಿಂದ ಮಾಡಲಾಗಿದೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ದಾಳಿ ನಡೆಸಲಾಗಿದೆ. ಹೀಗಾಗಿ ಈ ದಾಳಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಅವರು ತಿಳಿಸಿದರು.
ಬಿಜೆಪಿ ವಿರುದ್ಧ ಪ್ರತಿತಂತ್ರಕ್ಕೆ ಕಾಂಗ್ರೆಸ್ ಸಿದ್ಧತೆ ?
ಕಾಂಗ್ರೆಸ್ ಸಚಿವರ ಮೇಲೆ ಐಟಿ ದಾಳಿ ನಡೆಸಿ ಆತಂಕ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ವಿರುದ್ಧ ಪ್ರತಿತಂತ್ರ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಗುಪ್ತವಾಗಿ ಚರ್ಚೆ ನಡೆಸಿದ್ದು, ಬಿಜೆಪಿ ನಾಯಕರುಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ಚುರುಕುಗೊಳಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಅನಂತಕುಮಾರ್ ಸಹಿತ ಬೇರೆ ಬೇರೆ ಪ್ರಕರಣಗಳಲ್ಲಿ 17ಕ್ಕೂ ಹೆಚ್ಚು ನಾಯಕರ ವಿರುದ್ಧ ಅಕ್ರಮ ಆಸ್ತಿ ಗಳಿಕೆ, ಟ್ರಸ್ಟ್ ಹೆಸರಲ್ಲಿ ವಂಚನೆ ಸಹಿತ ಅನೇಕ ಪ್ರಕರಣಗಳು ಎಸಿಬಿ, ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದು, ಅಂತಹ ಪ್ರಕರಣಗಳ ಸದ್ಯದ ಸ್ಥಿತಿಗತಿ ಅರಿತು, ತನಿಖೆ ಚುರುಕುಗೊಳಿಸಲು ಸಿಎಂ ಆಲೋಚಿಸಿದ್ದಾರೆ ಎನ್ನಲಾ ಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳನ್ನು ತಮ್ಮ ನಿವಾಸ ಕಾವೇರಿಗೆ ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ