ಐಟಿ ದಾಳಿ: ಡಿಕೆಶಿ ಕೋರ್ಟ್ಗೆ ಹಾಜರು
Team Udayavani, Dec 11, 2019, 3:03 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣದ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಂಗವಾರ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾ ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಿದರು.
ಡಿಕೆಶಿ ಹಾಗೂ ಇತರೆ ಆರೋಪಿಗಳ ವಿರುದ್ಧ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದ 4ನೇ ಪ್ರಾಸಿಕ್ಯೂಷನ್ ವಿಚಾರಣೆ ಸಂಬಂಧ ಶಿವಕುಮಾರ್ ಕೋರ್ಟ್ಗೆ ಹಾಜರಾಗಿದ್ದರು. ಪ್ರಕರಣದಿಂದ ಕೈ ಬಿಡುವಂತೆ ಶಿವಕುಮಾರ್ ಹಾಗೂ ಇತರರು ಈ ಮೊದಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.
ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಇತರೆ ಆರೋಪಿಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ರುವ ವಿಚಾರವನ್ನು ವಕೀಲರು ಕೋರ್ಟ್ ಗಮನಕ್ಕೆ ತಂದರು. ಅಲ್ಲದೆ, ಸುಪ್ರೀಂಕೋರ್ಟ್ ವಿಚಾರಣೆ ಸಂಬಂಧ 1ತಿಂಗಳ ವಿನಾಯ್ತಿ ಕೊಡಬೇಕು ಎಂದು ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಅದಕ್ಕೆ ಅಸಮಾಧಾನಗೊಂಡ ಕೋರ್ಟ್, ಡಿ.20ಕ್ಕೆ ಸಾಕ್ಷಿಗಳ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.