ಕೆಎಸ್ಪಿಸಿಬಿ ಅಧ್ಯಕ್ಷರ ಮನೆ, ಕಚೇರಿ ಮೇಲೆ ಐಟಿ ದಾಳಿ
Team Udayavani, Oct 25, 2017, 9:33 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಮನೆ ಮತ್ತು ಕಚೇರಿ ಸೇರಿ 5 ಕಡೆಗಳಲ್ಲಿ ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತಡರಾತ್ರಿವರೆಗೆ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ 7 ಗಂಟೆ ಸುಮಾರಿಗೆ 30 ಮಂದಿಯ ತಂಡ ಲಕ್ಷ್ಮಣ್ ಅವರ ಸದಾಶಿವನಗರದಲ್ಲಿರುವ ಮನೆ, ಕಚೇರಿ, ಬಸವೇಶ್ವರನಗರ ಮತ್ತು ವಿಜಯನಗರ ದಲ್ಲಿರುವ ಮನೆ ಹಾಗೂ ಚರ್ಚ್ಸ್ಟ್ರೀಟ್ ನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡ ಳಿಗೆ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆಂದು ತಿಳಿದು ಬಂದಿದೆ. ಸದಾಶಿವನಗರದಲ್ಲಿರುವ ಸೂರ್ಯೋ
ದಯ ಹೆಸರಿನ ನಿವಾಸಕ್ಕೆ ಬಂದ 10 ಮಂದಿ ಅಧಿಕಾರಿಗಳು ಕೆಲ ದಾಖಲೆಗಳನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ. ಚರ್ಚ್ಸ್ಟ್ರೀಟ್ ನಲ್ಲಿರುವ ಪರಿಸರ ಭವನಕ್ಕೆ ತೆರಳಿದ ಅಧಿಕಾರಿಗಳು ಸಂಜೆ 7 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆ ಪತ್ರ ಹಾಗೂ ಕಡತಗಳನ್ನು ತಂಡ ವಶಕ್ಕೆ ಪಡೆದುಕೊಂಡಿದೆ. ದಾಳಿ ವೇಳೆ ಕೆಲ ದಾಖಲೆಗಳ ಕುರಿತು ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಲಕ್ಷ್ಮಣ್ ಗೊಂದಲದ ಉತ್ತರ ನೀಡಿದ್ದಾರೆನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮಣ್ ಮೂಲತಃ ಕನಕಪುರದವರು.